SHIVAMOGGA NEWS TODAY

500 ರೂಪಾಯಿ ಸಾಲದ ವಿಚಾರ : ಚಾಕುವಿನಿಂದ ಹಲ್ಲೆ ಮಾಡಿ ಜೀವ ಬೆದರಿಕೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಕೇವಲ 500 ರೂಪಾಯಿ ಸಾಲದ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸಾಲದ ಹಣವನ್ನು  ಹಿಂತಿರುಗಿಸಿದ್ದರೂ ಸಹ, ಸಾಲ ನೀಡಿದ್ದ ವ್ಯಕ್ತಿ  ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ : ಆನ್‌ಲೈನ್ ಟ್ರೇಡಿಂಗ್ ಆಮಿಷಕ್ಕೆ ಒಳಗಾಗಿ 39 ಲಕ್ಷ ಕಳೆದುಕೊಂಡ ಉದ್ಯಮಿ

Shivamogga Crime ಘಟನೆ ವಿವರ

ನಗರದ ನಿವಾಸಿ ದೂರುದಾರ ವ್ಯಕ್ತಿಯೊಬ್ಬರು ಇನ್ನೊಬ್ಬ ಪರಿಚಿತ ವ್ಯಕ್ತಿಯಿಂದ ತುರ್ತು ಅವಶ್ಯಕತೆಗಾಗಿ 500 ಹಣವನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಾಲ ಪಡೆದ ಕೇವಲ ಮೂರೇ ದಿನಗಳಲ್ಲಿ ಆ ಹಣವನ್ನು ಪರಿಚಿತ ವ್ಯಕ್ತಿಗೆ ವಾಪಸ್ ನೀಡಿದ್ದರು. ಆದಾಗ್ಯೂ, ಹಣದ ವಿಚಾರವಾಗಿ ಸಾಲ ಕೊಟ್ಟವ ದೂರುದಾರನ  ಮೇಲೆ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ.

ಇದರ ನಡುವೆ ದೂರುದಾರ ಸರ್ಕಲ್ ​​ಒಂದರ ಬಳಿ ನಿಂತಿದ್ದಾಗ . ಈ ವೇಳೆ ಅಲ್ಲಿಗೆ ಬಂದ ಆರೋಪಿ ದುರುದಾರನನ್ನು ಜನನಿಬಿಡವಲ್ಲದ ಜಾಗಕ್ಕೆ ಕರೆದೊಯ್ದಿದ್ದಾನೆ. ಅಲ್ಲಿಗೆ ಹೋಗುತ್ತಿದ್ದಂತೆ ದೂರುದಾರನನ್ನು ಅಡ್ಡಗಟ್ಟಿದ ಆರೋಪಿ, ಅಶ್ಲೀಲ ಪದಗಳಿಂದ ನಿಂದಿಸಲು ಆರಂಭಿಸಿದ್ದಾನೆ. ಮಾತು ಬೆಳೆಯುತ್ತಿದ್ದಂತೆ  ಆರೋಪಿ ತನ್ನ ಬಳಿಯಿದ್ದ ಚಾಕುವನ್ನು ತೆಗೆದು ದೂರುದಾರನ ತಲೆಯ ಹಿಂಭಾಗಕ್ಕೆ ಬಲವಾಗಿ ಇರಿದಿದ್ದಾನೆ. 

ಚಾಕು ಇರಿತದ ರಭಸಕ್ಕೆ  ದೂರುದಾರನ ತಲೆಯಿಂದರ ಕ್ತಸ್ರಾವವಾಗಿದ್ದು, ಅಷ್ಟಕ್ಕೇ ನಿಲ್ಲಿಸದ ಆರೋಪಿ ಕೈಗಳಿಂದಲೂ ಮನಬಂದಂತೆ ಥಳಿಸಿದ್ದಾನೆ. ಅಲ್ಲದೆ, ನಿನಗೆ ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.. ಗಲಾಟೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ದೂರುದಾರನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಘಟನೆ ಹಿನ್ನೆಲ್ಲೆ ತುಂಗಾನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Shivamogga Crime Youth Assaulted with Knife

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.