ಸಾರಿಗೆ ನೌಕರರಿಂದ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಕ್ಕೆ ಗಡುವು

shivamogga news :  ಸಾರಿಗೆ ನೌಕರರಿಂದ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಕ್ಕೆ ಗಡುವು

ಶಿವಮೊಗ್ಗ: ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜಂಟಿ ಕ್ರಿಯಾ ಸಮಿತಿ) ಎಚ್ಚರಿಕೆ ನೀಡಿದೆ. ಆಗಸ್ಟ್ 4 ರೊಳಗೆ ಸರ್ಕಾರವು ತಮ್ಮೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸದಿದ್ದರೆ ಈ ನಿರ್ಧಾರ ಅನಿವಾರ್ಯ ಎಂದು ಸಮಿತಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಎಂ. ಮಹಾದೇವ್, 2023 ರಲ್ಲಿ ಶೇ.15 ರಷ್ಟು ಸಂಬಳ ಹೆಚ್ಚಳವಾಗಿದ್ದರೂ, 38 ತಿಂಗಳ ಬಾಕಿ ಹಣ ಇನ್ನೂ ಉಳಿದಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 1957 ರಿಂದ ಜಾರಿಯಲ್ಲಿದ್ದ ಕೈಗಾರಿಕಾ ಒಪ್ಪಂದವನ್ನು ರದ್ದುಪಡಿಸಿ ನಾಲ್ಕು ವರ್ಷಕ್ಕೊಮ್ಮೆ ಒಪ್ಪಂದ ಮಾಡಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಸರಿಯಲ್ಲ ಎಂದು ಅವರು ದೂರಿದರು. 

ಈ ಹಿಂದೆ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಬೆಳವಾವಿ ಚಲೋ  ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆಗ ಸಚಿವ ದಿನೇಶ್ ಗುಂಡೂರಾವ್ ಅವರು ಮನವಿ ಸ್ವೀಕರಿಸಿದ್ದರು. 2024 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಷ್ಕರನಿರತ ನೌಕರರ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರೂ, ನಾಲ್ಕು ತಿಂಗಳ ನಂತರವೂ ಅದನ್ನು ನಡೆಸಲಿಲ್ಲ. ಏಪ್ರಿಲ್‌ನಲ್ಲಿ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರೂ ನಂತರ ಅವರು ತಮ್ಮ ಮಾತಿನಿಂದ ಹಿಂದೆ ಸರಿದಿದ್ದಾರೆ ಎಂದು ಮಹಾದೇವ್ ಆರೋಪಿಸಿದರು.

shivamogga news : ಸಮಿತಿಯ ಪ್ರಮುಖ ಬೇಡಿಕೆಗಳು:

ಜನವರಿ 1 2020 ರಿಂದ ರಿಂದ ಬಾಕಿ ಇರುವ ಶೇ.15ರ ವೇತನ ಪರಿಷ್ಕರಣೆಯ 38 ತಿಂಗಳ ಬಾಕಿ ಹಣವನ್ನು ಸರ್ಕಾರ ಕೂಡಲೇ ಪಾವತಿಸಬೇಕು.

ಡಿಸೆಂಬರ್​ 31 2023 ರಲ್ಲಿದ್ದ ಸಾರಿಗೆ ನೌಕರರ ಮೂಲ ವೇತನಕ್ಕೆ ಶೇ.31ರಷ್ಟು ತುಟ್ಟಿ ಭತ್ಯೆಯನ್ನು ವಿಲೀನಗೊಳಿಸಿ ದಿನಾಂಕ ಜನವರಿ 01 2024  ರಿಂದ ಶೇ.25ರಷ್ಟು ವೇತನ ಹೆಚ್ಚಿಸಬೇಕು.

ಜುಲೈ 31 ರಂದು ಸಾಮೂಹಿಕ ಉಪವಾಸ ಸತ್ಯಾಗ್ರಹವನ್ನೂ ನಡೆಸಿದ್ದ ಸಮಿತಿ, ಆಗಸ್ಟ್ 4 ರ ಒಳಗೆ ಸರ್ಕಾರವು ಚರ್ಚಿಸಿ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಈ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸೇವೆಗಳಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ.

shivamogga news
shivamogga news

 

Leave a Comment