shivamogga news today : ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ KSRTC ಬಸ್
shivamogga news today : ಸ್ಥಳೀಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಮಾರ್ಗಕ್ಕೆ ಸಂಚರಿಸಲು ಸರ್ಕಾರಿ ನಗರ ಸಾರಿಗೆ (ಕೆ.ಎಸ್.ಆರ್.ಟಿ.ಸಿ) ಬಸ್ ಅನ್ನು ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದ ಎಸ್. ಮಧು ಬಂಗಾರಪ್ಪರವರು ಲೋಕಾರ್ಪಣೆ ಮಾಡಿದರು.
shivamogga news today : ಈ ಸಂದರ್ಭದಲ್ಲಿ ಈ ಭಾಗಕ್ಕೆ ಸರ್ಕಾರಿ ನಗರ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಅವಿರತ ಶ್ರಮವಹಿಸಿದ ಸ್ಥಳೀಯ ಮುಖಂಡರಾದ ಚೇತನ್ ಕೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಯೋಗೀಶ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸೂಡಾ ಅಧ್ಯಕ್ಷರಾದ ಎನ್. ರಮೇಶ್, ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ವಿಜಯಲಕ್ಷ್ಮಿ ಪಾಟೀಲ್, ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್, ಖಲೀಂ ಪಾಷ, ಕಾಂಗ್ರೆಸ್ ಮುಖಂಡರಾದ ಕೆ. ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ಯುವ ಕಾಂಗ್ರೆಸ್ ನಗರಾಧ್ಯಕ್ಷ ಚರಣ್, ಜಿಲ್ಲಾ ಎನ್.ಎಸ್.ಯು .ಐ ಅಧ್ಯಕ್ಷ ವಿಜಯ್, ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.