Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್, ತವಾ ಸೀಜ್!
Shivamogga Police/ Shimoga Police Department's massive hunt/ Rice, clothes, sarees, cookers, tawa seizes worth more than Rs 50 lakh in a single day!
![Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್, ತವಾ ಸೀಜ್!](https://i.pinimg.com/originals/ed/a0/33/eda033e7b56840343e9b6fd6214fd0bb.jpg)
ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನ ವಶಕ್ಕೆ ಪಡೆದಿದೆ.
ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್ ಇಲಾಖೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತು ಪಡೆಸಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಏನೇನು ಜಪ್ತಿ
- 1) ದಿನಾಂಕಃ 22-03-2023 ರಂದು ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 29,70,000/- ರೂಗಳ ಒಟ್ಟು 1100 ಸಂಖ್ಯೆಯ ನಾನ್ ಸ್ಟಿಕ್ ದೋಸಾ ತವಾ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- 2) ದಿನಾಂಕಃ 22-03-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 8,00,000/- ರೂಗಳ ಒಟ್ಟು 30 ಟನ್ ತೂಕದ ಬೇಳೆ, ರವೆ, ಗೋಧಿ ಮತ್ತು ಇತರೆ ಆಹಾರ ಸಾಮಗ್ರಿಗಳು ತುಂಬಿದ್ದ 1,000/- ಬ್ಯಾಗ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
- 3) ದಿನಾಂಕಃ 22-03-2023 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಸಾಗಿಸುತ್ತಿದ್ದ ಅಂದಾಜು ಮೌಲ್ಯ 7,00,000/- ರೂ ಗಳ ಒಟ್ಟು 10 ಟನ್ 504 ಕೆಜಿ ತೂಕದ ಅಕ್ಕಿ ತುಂಬಿದ್ದ 404 ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.
- 4) ದಿನಾಂಕಃ 22-03-2023 ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 10,00,000/- ರೂ ಗಳ ಬಟ್ಟೆ, ಸೀರೆ, ಇಡ್ಲಿ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ದಿನಾಂಕ 22-03-2023 ರಂದು ಅಂದಾಜು ಮೌಲ್ಯ 17,507/- ರೂಗಳ ಒಟ್ಟು 25 ಲೀಟರ್ 608 ಮಿಲಿ ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ ಪೊಲೀಸ್ ಇಲಾಖೆ ತಿಳಿಸಿದೆ.
ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್ಗೆ ₹500 ಸಬ್ಸಿಡಿ! ಏಕೆಗೊತ್ತಾ?
MALENADUTODAY.COM |SHIVAMOGGA| #KANNADANEWSWEB
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,Shivamogga Crime News ,Shivamogga Crime News , ಶಿವಮೊಗ್ಗ ಕ್ರೈಂ ರಿಪೋರ್ಟ್, ಶಿವಮೊಗ್ಗ ಪೊಲೀಸ್, ಶಿವಮೊಗ್ಗ ಎಸ್ಪಿ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್, ಶಿವಮೊಗ್ಗ ಕುಂಸಿ ಪೊಲೀಸರು