ಶಿವಮೊಗ್ಗ/ ಮಲೆನಾಡು ಟುಡೆ ಸುದ್ದಿ/ ಕೆನರಾ ಬ್ಯಾಂಕ್ ಮೂಲಕ ನಡೆಸಲ್ಪಡುತ್ತಿರುವ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಗಳ ಯೋಜನೆ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಮಹತ್ವದ ಅಪ್ಡೇಟ್ ನೀಡಿದ್ದಾರೆ. ದೇಶದಾದ್ಯಂತ ಅತ್ಯಂತ ಯಶಸ್ವಿಯಾಗಿರುವ ಈ ಯೋಜನೆ ಶಿವಮೊಗ್ಗದಲ್ಲಿ ವಿಶೇಷ ಯಶಸ್ಸು ಕಂಡಿದೆ ಅಂತಾ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಈ ಯೋಜನೆಯ ಪ್ರಗತಿಯ ಕುರಿತು ಪ್ರಶ್ನೆ ಎತ್ತಿದ್ದ ಸಂಸದರು, ಕೇಂದ್ರ ಸರ್ಕಾರದಿಂದ ಲಭ್ಯವಾದ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ
Shivamogga Self Employment Success
- ಸರ್ಕಾರದ ವರದಿಯ ಅನ್ವಯ, ದೀನದಯಾಳು ಅಂತ್ಯೋದಯ ಯೋಜನೆ – ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ದೇಶದ 619 ಜಿಲ್ಲೆಗಳಲ್ಲಿ ಒಟ್ಟು 632 ಕೇಂದ್ರಗಳು ಯುವಕರಿಗೆ ಉದ್ಯಮಶೀಲತೆಯ ತರಬೇತಿ ನೀಡುತ್ತಿವೆ.
- ಈ ಯೋಜನೆಯಡಿ ತರಬೇತಿ ಪಡೆದ ಯುವಕರಿಗೆ ಕೇವಲ ಕೌಶಲ್ಯ ಮಾತ್ರವಲ್ಲದೆ, ಬ್ಯಾಂಕ್ ಸಾಲ ಸೌಲಭ್ಯ ಹಾಗೂ ನಿರಂತರ ಮಾರ್ಗದರ್ಶನ ನೀಡುವ ಮೂಲಕ ಅವರು ಸ್ವಂತ ಉದ್ಯಮ ಆರಂಭಿಸಲು ಬೆಂಬಲ ನೀಡಲಾಗುತ್ತಿದೆ.
- ಕರ್ನಾಟಕ ರಾಜ್ಯವು ಈ ಯೋಜನೆಯ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದ್ದು, ರಾಜ್ಯದ 32 ಕೇಂದ್ರಗಳ ಮೂಲಕ ಕಳೆದ ಐದು ವರ್ಷಗಳಲ್ಲಿ 1,42,237 ಯುವಕರು ತರಬೇತಿ ಪಡೆದಿದ್ದಾರೆ. ವಿಶೇಷವೆಂದರೆ, ಇವರಲ್ಲಿ 1,11,371 ಮಂದಿ ಈಗಾಗಲೇ ಸ್ವಯಂ ಉದ್ಯೋಗದಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದ್ದಾರೆ.
ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ ; ಮಿಸ್ ಮಾಡ್ಕೋಬೇಡಿ!
ಶಿವಮೊಗ್ಗ ಜಿಲ್ಲೆಯಲ್ಲೂ ಈ ಯೋಜನೆಯು ಅದ್ಭುತ ಫಲಿತಾಂಶ ನೀಡಿದ್ದು, ಕಳೆದ ಐದು ವರ್ಷಗಳಲ್ಲಿ ತರಬೇತಿ ಪಡೆದ 4,840 ಯುವಕರಲ್ಲಿ 3,872 ಮಂದಿ ಸ್ವಂತ ಉದ್ಯಮ ಸ್ಥಾಪಿಸುವ ಮೂಲಕ ಶೇಕಡಾ 80 ರಷ್ಟು ಯಶಸ್ಸಿನ ಪ್ರಮಾಣ ದಾಖಲಾಗಿದೆ ಎಂದು ಸಂಸದರು ಹರ್ಷ ವ್ಯಕ್ತಪಡಿಸಿದ್ದಾರೆ.
