SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 14, 2024 shimoga toll ban
ಶಿಕಾರಿಪುರ- ಶಿರಾಳಕೊಪ್ಪ ಮದ್ಯೆ ಟೋಲ್ಗೇಟ್ ಬಂದ್ ಮಾಡುವ ವಿಚಾರವಾಗಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನಿನ್ನೆ ದಿನ ಸಭೆ ನಡೆಸಿದ್ದಾರೆ. ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ಅವರು, ಈ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಶಿಕಾರಿಪುರ- ಶಿರಾಳಕೊಪ್ಪ ಟೋಲ್ ಗೇಟ್
ಮೂರು ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ಒಂದೇ ಜಿಲ್ಲೆಯ ವ್ಯಾಪ್ತಿಯಲ್ಲಿ ಎರಡು ಟೋಲ್ ಹಾಕಿರುವುದು ಸರಿಯಲ್ಲ. ಟೋಲ್ ಗೇಟ್ ಗಳ ನಡುವೆ 60 ಕಿಮೀ ಅಂತರವಿರಬೇಕು ಎಂಬ ಮಾರ್ಗಸೂಚಿಯನ್ನ ಸಹ ಇಲ್ಲಿ ಪಾಲಿಸಲಾಗಿಲ್ಲ ಎಂದರು.

ಶಿವಮೊಗ್ಗ ತಾಲೂಕಿನ ಕಲ್ಲಾಪುರ, ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ನಲ್ಲಿ ಟೋಲ್ಗೇಟ್ ಹಾಕಲಾಗಿದೆ. ಇದು ಮಾರ್ಗ ಸೂಚಿಯ ಉಲ್ಲಂಘನೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇನ್ನೂ ಇವತ್ತಿನಿಂದ ಟೋಲ್ ಸಂಗ್ರಹ ಬಂದ್ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮೌಖಿಕವಾಗಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಸಂಬಂಧ ಟೋಲ್ ನ್ಯೂನತೆ ಸರಿಪಡಿಸಲು ಕೆ-ಶಿಫ್ ಅಧಿಕಾರಿಗಳು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ https://chat.whatsapp.com/FxYXrxP9Vbq6Xd5jML5sQN
TODAY ವಾಟ್ಸ್ಯಾಪ್ ಚಾನಲ್ ಫಾಲೋ ಮಾಡಿ https://whatsapp.com/channel/0029Va9I91s3LdQVrdq7yl1h
ಗೂಗಲ್ ನ್ಯೂಸ್ ಜಸ್ಟ್ ಫಾಲೋಕೊಡಿ https://news.google.com/publications/CAAqBwgKMLWipQwwx5q0BA?ceid=IN:en&oc=3