ಶಿವಮೊಗ್ಗ : ಶಿವಮೊಗ್ಗ ನಗರದ ಮಂಡ್ಲಿ ಪ್ರದೇಶದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ, ಡಿಸೆಂಬರ್ 11 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು.
ವಿದ್ಯುತ್ ನಿಲುಗಡೆಯ ಕಾರಣದಿಂದ, ಡಿಸೆಂಬರ್ 11 ಮತ್ತು ಡಿಸೆಂಬರ್ 12 ಈ ಎರಡು ದಿನಗಳ ಕಾಲ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಕನನೀಸ ಮತ್ತು ಒಚ ಮಂಡಳಿ (ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ) ಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.








