MALNAD SUDDI

sigandur bridge : ಸಿಗಂದೂರು ಸೇತುವೆ ವೀಕ್ಷಿಸಿದ ಕಾಗೋಡು | ಹೇಳಿದ್ದೇನು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

sigandur bridge : ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.ಇದರ ನಡುವೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇತುವೆಗೆ ಭೇಟಿ ನೀಡಿ ವೀಕ್ಷಣೆ ಮಾಡಿ ಮೆಚ್ಚುಗೆಯ ಮಾತನ್ನು ಆಡಿದ್ದಾರೆ.

sigandur bridge : ಮುಳುಗಡೆ ಪ್ರದೇಶದ ಜನರಿಗೆ ಮುಕ್ತಿ ಸಿಕ್ಕಿದೆ

ಈ ಹಿಂದೆ ಕಾಗೋಡು ತಿಮ್ಮಪ್ಪರವರು  ಕೇಂದ್ರ ಭೂ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರ ಮನೆಗೆ  ತೆರಳಿ ಸಿಗಂದೂರು  ಜನರಿಗೆ ಈ ಸೇತುವೆಯ ಅವಶ್ಯಕತೆ ಬಹಳಾ ಇದೆ ಇದರಿಂದಾಗಿ ಬೇಗ ಅನುದಾನ ದೊರಕಿಸಿ ಕೊಡಿ ಎಂದು ಮನವಿ ಮಾಡಿದ್ದರು. ನಂತರ ಕೆಲವು ರಾಜಕಾರಣಿಗಳ ಪ್ರಯತ್ನದ ಫಲದಿಂದ ಇಂದು ಆ ಸೇತುವೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.  ಇಂದು ಈ ಸೇತುವೆಯ  ಕುರಿತು ಮಾತನಾಡಿರುವ ಅವರು ಇದೊಂದು ಅಪೂರ್ವವಾದ ದಿನ. ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು ಮಾಡಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿರವರಿಗೆ  ಸೇತುವೆಗೆ ದುಡಿದ ಸಣ್ಣ ಕಾರ್ಮಿಕರಿಂದ ದೊಡ್ಡ ಇಂಜಿನಿಯರ್ ಗಳಿಗೆ  ಸುತ್ತಮುತ್ತಲಿನ ಜನರ ಪರವಾಗಿ ಕೃತಜ್ಞತೆ ಸಲ್ಲಿಸುವೆ. ಕರೂರು ಬಾರಂಗೀ ಹೋಬಳಿಯ ಮುಳುಗಡೆ ಪ್ರದೇಶದ ಜನರಿಗೆ  ಸೇತುವೆಯ ನಿರ್ಮಾಣದಿಂದ ಬಿಡುಗಡೆ ಸಿಕ್ಕಿದೆ ಎಂದರು.

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.