ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಒಂದೆ ಕುಟುಂಬದ ಆರು ಮಂದಿ ಸಾವು

Six members of a family were killed while playing in the backwater. Incident in Kali backwater in Dandeli, Uttara Kannada district. Deceased is from Hubli

ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಒಂದೆ ಕುಟುಂಬದ ಆರು ಮಂದಿ ಸಾವು
Kali backwater ,Dandeli, Uttara Kannada ,Hubli

SHIVAMOGGA | MALENADUTODAY NEWS |  Apr 22, 2024  

ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಕಾಳಿ ನದಿ ಹಿನ್ನೀರು ಪ್ರದೇಶದಲ್ಲಿ ಆಟವಾಡುತ್ತಿದ್ದ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇಲ್ಲಿನ ಬೀರಂಪಾಲಿಯ ಅಕ್ವಾಡ ಗ್ರಾಮದ ಹತ್ತಿರ ನಾಲ್ವರು ಮಕ್ಕಳು ಸೇರಿದಂತೆ, ಒಂದೇ ಕುಟುಂಬದ ಆರು ಜನ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ನಿನ್ನೆ ಅಂದರೆ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ. 

ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್  ಹೊಂಬಳ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್‌ (6), ಬೆಂಗಳೂರಿನ ನಿವಾಸಿಗಳಾದ ರೇಷಾ ಉನ್ನಿಸಾ ತೋಸಿಫ್ ಅಹ್ಮದ್ (38), ಇಫ್ರಾ‌ ತೋಸಿಫ್ ಅಹ್ಮದ್ (15), ಅಬೀದ್ ಅಹ್ಮದ್ (12) ಮೃತರು

ಹುಬ್ಬಳ್ಳಿಯಿಂದ ದಾಂಡೇಲಿಯ ಪ್ರವಾಸಕ್ಕೆ ಕುಟುಂಬ ಸಮೇತರಾಗಿ ಎಂಟು ಮಂದಿ ಬಂದಿದ್ದರು. ಅವರೆಲ್ಲರು ಹಿನ್ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನೀರಿನಾಳಕ್ಕೆ ಸಿಲುಕಿದ ಮಕ್ಕಳು ಮುಳುಗಲು ಆರಂಭಿಸಿದ್ದಾರೆ. ಅವರನ್ನ ರಕ್ಷಿಸಲು ಮುಂದಾದ ಒಬ್ಬೊಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.