SHIVAMOGGA NEWS TODAY

ರೈಲು ಪ್ರಯಾಣಿಕರ ಗಮನಕ್ಕೆ: ಜೂನ್ 18 ಮತ್ತು 23 ರಂದು ಶಿವಮೊಗ್ಗ, ಮೈಸೂರು, ತಾಳಗುಪ್ಪ ರೈಲುಗಳು ರದ್ದು, ತಡವಾಗಿ ಸಂಚಾರ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

South Western Railway ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ಮಧ್ಯೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದಾಗಿ, ಶಿವಮೊಗ್ಗ, ತಾಳಗುಪ್ಪ ಹಾಗೂ ಮೈಸೂರು ಮಾರ್ಗದ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಕೆಳಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 18 ಮತ್ತು ಜೂನ್ 23 ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ: 56267), ಮೈಸೂರು–ತಾಳಗುಪ್ಪ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16206) ಹಾಗೂ ತಾಳಗುಪ್ಪ–ಮೈಸೂರು ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16205) ರೈಲುಗಳ ಸೇವೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿದೆ.

ಇದೇ ದಿನಾಂಕಗಳಂದು ಚಲಿಸಬೇಕಿದ್ದ ಮೈಸೂರು–ಶಿವಮೊಗ್ಗ ಟೌನ್ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16225) ರೈಲಿನ ಸೇವೆಯನ್ನು ಮೈಸೂರು ಮತ್ತು ಅರಸೀಕೆರೆ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ. ಈ ಎರಡು ದಿನಗಳಲ್ಲಿ ಈ ರೈಲು ಮೈಸೂರಿನಿಂದ ಹೊರಡುವ ಬದಲಿಗೆ, ಅರಸೀಕೆರೆ ನಿಲ್ದಾಣದಿಂದಲೇ ತನ್ನ ನಿಗದಿತ ಸಮಯಕ್ಕೆ ಶಿವಮೊಗ್ಗದತ್ತ ಸಂಚಾರ ಆರಂಭಿಸಲಿದೆ 

ಜೂನ್ 18 ಮತ್ತು 23 ರಂದು ಪ್ರಯಾಣ ಆರಂಭಿಸುವ ಮೈಸೂರು–ಯಶವಂತಪುರ ದೈನಂದಿನ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುತ್ತಿದೆ. ಅದರಂತೆ ಜೂನ್ 18 ರಂದು 30 ನಿಮಿಷ ಹಾಗೂ ಜೂನ್ 23 ರಂದು ಬರೋಬ್ಬರಿ 120 ನಿಮಿಷಗಳು (2 ಗಂಟೆ) ಈ ರೈಲು ಮಾರ್ಗಮಧ್ಯೆ ತಡವಾಗಿ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

South Western Railway Announces Train Cancellations

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.