ಲೋಕಾಯುಕ್ತ DYSP ಐವರು ಪೊಲೀಸರಿಗೆ ಎಸ್​ಪಿ ಮಿಥುನ್ ಕುಮಾರ್ ಸನ್ಮಾನ! ಕಾರಣ?

Malenadu Today

KARNATAKA NEWS/ ONLINE / Malenadu today/ Oct 12, 2023 SHIVAMOGGA NEWS

ಪೋಕ್ಸೋ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ ಪೊಲೀಸರಿಗೆ ಇವತ್ತು ಎಸ್​ಪಿ ಮಿಥುನ್ ಕುಮಾರ್ ಸನ್ಮಾನ ಮಾಡಿದ್ದಾರೆ 

2020ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್.ಸಿ ಎಸ್.ಟಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ  ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ, ಹಾಲೀ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ,  ಮತಿ ಶಾಂತಲಾ, ಪಿಎಸ್ಐ ಹಾಲಿ ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಮತ್ತು ಸಹಾಯಕ ತನಿಖಾಧಿಕಾರಿಗಳಾದ  ಮತಿ ಲಕ್ಷ್ಮಿ ಮಹೆಚ್ ಸಿ ಹಾಲಿ ಮಹಿಳಾ ಪೊಲೀಸ್ ಠಾಣೆ ರವರುಗಳು ಮತ್ತು

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NDPS  ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ  ಮಂಜುನಾಥ್ ಪಿಎಸ್ಐ, ಹಾಲಿ ತುಂಗಾನಗರ ಪೊಲೀಸ್ ಠಾಣೆ ಮತ್ತು  ಸಹಾಯಕ ತನಿಖಾಧಿಕಾರಿಗಳಾದ   ಜಿ. ಬಿ. ನಾಗರಾಜ್, ಹೆಚ್.ಸಿ ಹಾಲಿ ಹೊಳೆಹೊನ್ನೂರು ಪೊಲೀಸ್ ಠಾಣೆ ರವರುಗಳು  ಸದರಿ ಪ್ರಕರಣಗಳಲ್ಲಿನ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಈ ಹಿನ್ನೆಲೆಯಲ್ಲಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು  ಜಿಲ್ಲಾ ಪೊಲೀಸ್ ಪೊಲೀಸ್ ಕಛೇರಿಯಲ್ಲಿ ತಮ್ಮ ಸಿಬ್ಬಂದಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿ ಗೌರವಿಸಿರುತ್ತಾರೆ.

 ಈ ಸಂದರ್ಭದಲ್ಲಿ   ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ,   ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷಕರು, ಡಿಸಿಆರ್.ಬಿ, ಶಿವಮೊಗ್ಗ ಜಿಲ್ಲೆ ರವರು ಉಪಸ್ಥಿತರಿದ್ದರು.

 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

Share This Article