ಶಿವಮೊಗ್ಗ: ಶಿರಾಳಕೊಪ್ಪದ ಬಿಳಕಿ ಗ್ರಾಮದ ಅಂಗನವಾಡಿ ಸಹಾಯಕಿ ಪ್ರೇಮ ಮಡಿವಾಳರ (56) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಪ್ರಕರಣದ ಕುರಿತಾಗಿ ಎಸ್,ಪಿ ನಿಖಿಲ್ ಬಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ: ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ ಮತ್ತು ಟ್ರಾಫಿಕ್ ಪೊಲೀಸರು.
ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರೇಮ ಮಡಿವಾಳರ ಸಾವಿನ ಕುರಿತಾಗಿ ವಿಚಾರಣೆ ನಡೆಸಿದಾಗ ಮೃತರ ಸಂಬಂಧಿ ರಾಘವೇಂದ್ರ ಎಂಬಾತನ ಮೇಲೆ ಅನುಮಾನ ವ್ಯಕ್ತವಾಗಿತ್ತು. ಇವರಿಬ್ಬರ ನಡುವೆ ಕಳೆದ ಕೆಲವು ದಿನಗಳ ಹಿಂದೆ ಮಾತಿನ ಚಕಮಕಿ ಹಾಗೂ ವೈಮನಸ್ಸು ನಡೆದಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಘವೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಈ ಕುರಿತಾದ ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ನಂತರ ತಿಳಿದು ಬರಲಿದೆ ಎಂದರು.
SP Nikhil Confirms Arrest in Shiralakoppa Murder


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.