ಮಗಳನ್ನು ಕೊಂದು ತಾಯಿ ಆತ್ಮಹತ್ಯೆ! ಕಾರಣವೇನು! ಶಿವಮೊಗ್ಗ ಎಸ್​ಪಿ ಹೇಳಿದ್ದೇನು?

prathapa thirthahalli
Prathapa thirthahalli - content producer

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 3 2025:   ಶಿವಮೊಗ್ಗ:: ನಗರದ ಮೆಗ್ಗಾನ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಕ್ವಾಟ್ರಸ್‌ನಲ್ಲಿ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆಗೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮರ್ಡರ್-ಸುಸೈಡ್  ಪ್ರಕರಣ ದಾಖಲಾಗಿದೆ. ಪೂರ್ವಿಕಾ ಎಂಬ ಸಣ್ಣ ಹುಡುಗಿಯ ಕೊಲೆಯಾಗಿದ್ದು, ಮೃತ ಪೂರ್ವಿಕಾಳ ತಲೆ ಮತ್ತು ಮುಖದ ಭಾಗಕ್ಕೆ ಚುಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ,” ಎಂದು ಮಾಹಿತಿ ನೀಡಿದರು.

- Advertisement -
Shivamogga Police Urge Beware of Online Scams Pakistan Zindabad Slogans shiralakoppa police raid and sp statement  bommanakatte murder case sp mithun kumar
bommanakatte murder case sp mithun kumar sp statement

ಮೃತಳ ದೇಹದ ಮೇಲೆ ನಿಂತು ಆಕೆಯ ತಾಯಿ ಶ್ರುತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಎರಡು ದೇಹಗಳು ಪತ್ತೆಯಾಗಿವೆ, ಮೃತೆ ಶ್ರುತಿಯ ಪತಿ ರಾಮಣ್ಣ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಪತ್ನಿ ಹಾಗೂ ಮಗಳು ಸಾವಿಗೀಡಾಗಿದ್ದಾರೆ. “ರಾಮಣ್ಣ ಅವರು ನೈಟ್ ಡ್ಯೂಟಿ ಮುಗಿಸಿ ಬೆಳಿಗ್ಗೆ ಮನೆಗೆ ಬಂದಾಗ ಬಾಗಿಲು ತೆರೆದಿರಲಿಲ್ಲ. ನಂತರ ಅಕ್ಕಪಕ್ಕದವರ ನೆರವಿನಿಂದ ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಎಸ್ಪಿ ಹೇಳಿದರು.

Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga.
Shruthi (38) kills her daughter Poorvika (6th grade) with a machete before committing suicide in Meggan Nursing Quarters, Shivamogga. sp statement

ಇದನ್ನು ಸಹ ಓದಿ :  ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

sp statement about Wife Kills Daughter

Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *