Special Intensive Revision ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಭಾರತ ಚುನಾವಣಾ ಆಯೋಗ, ನವದೆಹಲಿ ಹಾಗೂ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಪ್ರಾರಂಭವಾಗಲಿದೆ. ಈ ಕಾರ್ಯಕ್ಕೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಭದ್ರಾವತಿ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು 10 ಸಾವಿರ ಬಹುಮಾನ
ಈ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ 112-ಭದ್ರಾವತಿ ಕ್ಷೇತ್ರದಲ್ಲಿ 2002 ಮತ್ತು 2025 ರ ಸಾಲಿನ ಮತದಾರರ ಪಟ್ಟಿಯ ಮ್ಯಾಪಿಂಗ್ ಹಾಗೂ 18 ರಿಂದ 40 ವರ್ಷದೊಳಗಿನ ಹೊಸ ಮತದಾರರ ಸಂತತಿ ಸೇರ್ಪಡೆ ಅಥವಾ ಪ್ರೊಜಿನಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ
ಈ ಮ್ಯಾಪಿಂಗ್ ಕಾರ್ಯವನ್ನು ಯಶಸ್ವಿಗೊಳಿಸಲು ಕ್ಷೇತ್ರದ ಮತದಾರರು ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದ ಬಿ.ಎಲ್.ಓ ಅಥವಾ ಬೂತ್ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದು ಸೂಚಿಸಲಾಗಿದೆ. ಮತದಾರರು ಪ್ರಸ್ತುತ ಹೊಂದಿರುವ ಗುರುತಿನ ಚೀಟಿಯೊಂದಿಗೆ 2002 ರಲ್ಲಿ ತಾವು ಮತದಾನ ಮಾಡಿದ ವಿವರಗಳು, ಅಂದಿನ ಗುರುತಿನ ಚೀಟಿ, ಮತದಾನ ಮಾಡಿದ ಕೇಂದ್ರದ ಹೆಸರು ಹಾಗೂ ಕ್ರಮ ಸಂಖ್ಯೆಯ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸಿ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ಕೆ ಮತದಾರರು ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು ಭದ್ರಾವತಿ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳು (Special Intensive Revision) ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

ಹೊಸನಗರ ರೂಟ್ನಲ್ಲಿ ಹೋಗ್ತಿದ್ದಾಗ ದೊಪ್ಪಂತ ಬಿತ್ತು ಮರ! ಕಾರು ಪೂರ್ತಿ ಜಖಂ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ! Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,