SHIVAMOGGA | Jan 7, 2024 | ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Muzrai Minister Ramalinga Reddy )ಸೂಚನೆ ನೀಡಿದ್ದಾರೆ.
READ :ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್ ಡ್ಯಾನ್ಸ್ ಗೆ ಅವಕಾಶ?
ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಪ್ರತ್ಯೇಕವಾಗಿ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ಜನವರಿ 22 ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಆ ಮುಹೂರ್ತದ ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಕೇವಲ ರಾಮನ ದೇವಾಲಯ ಮಾತ್ರವಲ್ಲದೇ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಲು ಸುತ್ತೋಲೆ ಹೊರಡಿಸುವಂತೆ ಸಚಿವರು ಸೂಚಿಸಿದ್ದಾರೆ .
