ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ! ಸರ್ಕಾರದ ಸುತ್ತೋಲೆ?

SHIVAMOGGA  |  Jan 7, 2024  |   ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ  ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ  (Muzrai Minister Ramalinga Reddy )ಸೂಚನೆ ನೀಡಿದ್ದಾರೆ.

READ :ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್​ ಡ್ಯಾನ್ಸ್ ಗೆ ಅವಕಾಶ?

ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಪ್ರತ್ಯೇಕವಾಗಿ ಸುತ್ತೋಲೆ ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ಜನವರಿ 22 ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಆ ಮುಹೂರ್ತದ  ಹೊತ್ತಿನಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.  

 

ಕೇವಲ ರಾಮನ ದೇವಾಲಯ ಮಾತ್ರವಲ್ಲದೇ ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಪೂಜೆ ಸಲ್ಲಿಸಲು ಸುತ್ತೋಲೆ ಹೊರಡಿಸುವಂತೆ ಸಚಿವರು ಸೂಚಿಸಿದ್ದಾರೆ . 

Leave a Comment