NES ಹಬ್ಬದ ಸಿದ್ದತೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿ ಆಕ್ಸಿಡೆಂಟ್​ನಲ್ಲಿ ಸಾವು!

Student who was on his way home after preparing for NES festival died in an accident!

NES  ಹಬ್ಬದ ಸಿದ್ದತೆ ಮುಗಿಸಿ  ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿ ಆಕ್ಸಿಡೆಂಟ್​ನಲ್ಲಿ ಸಾವು!

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS

ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಎನ್​ಇಎಸ್​ ಹಬ್ಬದ ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದ ವಿದ್ಯಾರ್ಥಿ, ಮನೆಗೆ ಹೋಗುವಾಗ ಆಕ್ಸಿಡೆಂಟ್​ ಆಗಿದ್ದು ಗೌತಮ್​ ಎಂಬ 21 ವರ್ಷದ ಎಲ್​ಎಲ್​ಬಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.


ಮಳೆಯ ಅಭಾವದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಶಂಕಿತ ಕಾಲರಾ ಪ್ರಕರಣಳು ಪತ್ತೆ! ಕಾದಾರಿಸಿದ ನೀರನ್ನೆ ಕುಡಿಯಿರಿ!

ಏನಾಗಿದ್ದು ಘಟನೆ

ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​ ತಮ್ಮ ಮನೆಗೆ ಹೋಗುತ್ತಿದ್ದ. ಈ ವೇಳೆ ಚಾಲುಕ್ಯ ಬಾರ್​ ಸಮೀಪದ ಪುಟ್​ಪಾತ್​ ನಲ್ಲಿ,  ಆತನ ಬೈಕ್​ ಸ್ಕಿಡ್​ ಆಗಿದೆ. ಪರಿಣಾಮ ಕೆಳಕ್ಕೆ ಬಿದ್ದ ಗೌತಮ್​ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ಧಾನೆ.. 

ಇನ್ನೂ ಗೌತಮ್​ ಶಿವಮೊಗ್ಗದ ನ್ಯಾಯಾದೀಶರೊಬ್ಬರ ಮಗ ಎಂಬುದು ತಿಳಿದುಬಂದಿದ್ದು, ಕಾಶೀಪುರದಲ್ಲಿ ಅವರ ನಿವಾಸವಿದ್ದು, ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ವಿದ್ಯಾರ್ಥಿಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದು, ಶವಾಗಾರದ ಬಳಿಯಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.