ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ಪ್ರಿನ್ಸಿಪಾಲರ ವಿರುದ್ಧವೇ ವಿದ್ಯಾರ್ಥಿಗಳ ಪ್ರತಿಭಟನೆ?

ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ಪ್ರಿನ್ಸಿಪಾಲರ ವಿರುದ್ಧವೇ ವಿದ್ಯಾರ್ಥಿಗಳ ಪ್ರತಿಭಟನೆ Students protest against principal of Hosanagara Kodachadri College

ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ಪ್ರಿನ್ಸಿಪಾಲರ ವಿರುದ್ಧವೇ ವಿದ್ಯಾರ್ಥಿಗಳ ಪ್ರತಿಭಟನೆ?

KARNATAKA NEWS/ ONLINE / Malenadu today/ Jul 18, 2023 SHIVAMOGGA NEWS

ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಪ್ರಥಮ ಧರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅಲ್ಲಿಯ ಪ್ರಾಂಶುಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ರು. ಎಬಿವಿಪಿ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದುರು.  ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು  ಜಂಟಿ ನಿರ್ದೇಶಕರಿಗೆ ನೀಡಿದ ದೂರಿನಲ್ಲಿ ಆಪಾದಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದರು. ಪ್ರತಿಭಟನೆ ನಿರತ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಅಳಲನ್ನು ಆಲಿಸಿದ ಅಧಿಕಾರಿಗಳು ಈ ಸಂಬಂಧ ಪರಿಶೀಲನೆ ನಡೆಸಿದರು. 


ಶಿವಮೊಗ್ಗದ ಈ ಭಾಗಗಳಲ್ಲಿ ಎರಡು ದಿನ ಇರೋದಿಲ್ಲ ವಿದ್ಯುತ್ ! ಎಲ್ಲೆಲ್ಲಿ? ಯಾವಾಗ ! ಪೂರ್ಣ ವಿವರ ಇಲ್ಲಿದೆ ಓದಿ

ಜು.19 ಮತ್ತು 21 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊನ್ನವಿಲೆ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿಕ್ಯಾಂಪ್, ಮಾಳೇನಹಳ್ಳಿ  ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಹಾಗೂ  ಸುತ್ತಮುತ್ತಲಿನ ಗ್ರಾಮಗಳಲ್ಲಿ ಜುಲೈ 19 ಮತ್ತು 21 ರ ಬೆಳಗ್ಗೆ 10-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಜುಲೈ 19 ರಂದು ಈ ಭಾಗಗಳಲ್ಲಿ ವಿದ್ಯುತ್​ ಇರೋದಿಲ್ಲ

ಶಿವಮೊಗ್ಗ ಎಂಆರ್​ಎಸ್​ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತುರ್ತು ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜುಲೈ 19 ರ ಬೆಳಗ್ಗೆ 09-00 ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ(Power cut) 

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋಣಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅಮರಾವತಿ ಕ್ಯಾಂಪ್, ಬಿದರೆ ಹಾಗೂ  ಸುತ್ತಮುತ್ತಲಿನ ಗ್ರಾಮಗಳಲ್ಲಿ ಪವರ್ ಕಟ್ ಇರಲಿದೆ.

ಎಲ್ಲೆಂದರಲ್ಲಿ ಉಗಿಯಬೇಡಿ! ಭದ್ರಾವತಿ ಕೋರ್ಟ್​ನಲ್ಲಿ ಗುಟ್ಕಾ ಉಗಿದಿದ್ದಕ್ಕೆ ಏನಾಯ್ತು ಗೊತ್ತಾ!?

ಭದ್ರಾವತಿ / ಬಾಯ್ತುಂಬಾ ಗುಟ್ಕಾ ಹಾಕಿ ಎಲ್ಲಂದರಲ್ಲಿ ಉಗಿಯುವ ಅಭ್ಯಾಸ ಕೆಲವರಿಗೆ ಇರುತ್ತದೆ. ಅಂತಹ ವ್ಯಕ್ತಿಯೊಬ್ಬರಿಗೆ ಭದ್ರಾವತಿ ಕೋರ್ಟ್ ಜಡ್ಜ್  ತಕ್ಕ ಪಾಠವನ್ನು ಕಲಿಸಿದ್ಧಾರೆ. ಭದ್ರಾವತಿ ಹೆಚ್ಚುವರಿ ಸಿವಿಲ್ ಹಿರಿಯ ನ್ಯಾಯಾಲದ, ಹೊರ ಭಾಗದ ಗೋಡೆಯೊಂದರ ಮೇಲೆ ಅಲ್ಲಿಯೇ ನಿಂತಿದ್ದ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಉಗಿಯುತ್ತಿದ್ದ, ಆಕಸ್ಮಾತ್​ ಆಗಿ ಇದನ್ನು ನ್ಯಾಯಾದೀಶರು ಕಂಡಿದ್ದಾರೆ. ತಕ್ಷಣವೇ ಆತನ ಪೊಲೀಸರ ಜೊತೆಯಲ್ಲಿ ಉಗುಳಿತಿದ್ದ ವ್ಯಕ್ತಿಯನ್ನು ಕರೆಸಿಕೊಂಡಿದ್ದಾರೆ. ಅಲ್ಲದೆ ಉಗಿದು ಗಲೀಜು ಮಾಡಿದ್ದನ್ನ ಆತನಿಂದಲೇ ಕ್ಲೀನ್ ಮಾಡಿಸಿದ್ದಾರೆ. ಬಳಿಕ ಅಲ್ಲಿದ್ದ ಸಾರ್ವಜನಿಕರಿಗೆ  ಈ ರೀತಿ ಮಾಡದಿರಿ ಎಂದು ತಿಳಿ ಹೇಳಿದ್ದಾರೆ


ಕೆಎಎಸ್​ ಅಧಿಕಾರಿಗಳ ವರ್ಗಾವಣೆ! ಶಿವಮೊಗ್ಗಕ್ಕೆ ಮೂವರು ಆಫಿಸರ್​ ಟ್ರಾನ್ಸಫರ್​! ಯಾವ್ಯಾವ ಸ್ಥಾನಕ್ಕೆ ಯಾರು ಆಯ್ಕೆ! ಇಲ್ಲಿದೆ ಡಿಟೇಲ್ಸ್!

ಶಿವಮೊಗ್ಗದ ಪ್ರಮುಖ ಭಾಗಗಳಲ್ಲಿ ಜುಲೈ 19 ರಂದು ಇಡೀದಿನ ಇರೋದಿಲ್ಲ ಕರೆಂಟ್ ! ಎಲ್ಲೆಲ್ಲಿ? ವಿವರ ಇಲ್ಲಿದೆ

ಪೋಸ್ಟ್ ಆಫೀಸ್​ನಲ್ಲಿ SB ಅಕೌಂಟ್ ಇದೆಯಾ? ಆಧಾರ್ ಲಿಂಕ್ ಮಾಡಿಸಿದ್ದೀರಾ? ಇಲ್ಲದಿದ್ದರೇ ರದ್ದಾಗುತ್ತೆ ಈ ಸೌಲಭ್ಯ! ವಿವರ ಓದಿ!

ಬಿತ್ತಿದ ಜೋಳಕ್ಕಾಗಿ ಹೊಲದಲ್ಲೇ ಹೊಡೆದಾಟ! ಶಿವಮೊಗ್ಗದಲ್ಲಿ ತಾರಕಕ್ಕೇರಿದ ಅನ್ನದಾತರ ಕಾಳಗ! ವಿಡಿಯೋ ಸ್ಟೋರಿ