Doddapete Police Station / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಮುದಾಯದಲ್ಲಿ ನಂಬಿಕೆ ಮೂಡಿಸಲು ಮತ್ತು ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಪ್ರಯತ್ನದ ಭಾಗವಾಗಿ, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಕುರಿತಾದ ಭಯ ಮತ್ತು ಗೊಂದಲಗಳನ್ನು ನಿವಾರಿಸಲು, ಜಿಲ್ಲಾ ಶಸ್ತ್ರಾಗಾರದಿಂದ ತರಲಾಗಿದ್ದ ರೈಫಲ್ಸ್, ಪಿಸ್ತೂಲ್ ಸೇರಿದಂತೆ ವಿವಿಧ ಆಯುಧಗಳ ಪ್ರದರ್ಶನ ಮಾಡಲಾಯ್ತು. ಅಲ್ಲದೆ ಈ ಬಗ್ಗೆ ವಿದ್ಯಾರ್ಥಿಗಳಿಗೆ ಪೊಲೀಸರು ವಿವರಿಸಿ ಮಾಹಿತಿ ನೀಡಿದರು. ಜೊತೆಯಲ್ಲಿ ಸಾರ್ವಜನಿಕ ಸುರಕ್ಷತೆಯಲ್ಲಿ ಇವುಗಳ ಪಾತ್ರವೇನು ಎಂಬುದನ್ನು ಅಧಿಕಾರಿಗಳು ವಿವರಿಸಿದರು. ಇದಲ್ಲದೆ, ವಿದ್ಯಾರ್ಥಿಗಳು ದೊಡ್ಡಪೇಟೆ ಪೊಲೀಸ್ ಠಾಣೆಯ ಒಳಗೆ ಹೋಗಿ ಅಲ್ಲಿನ ಕೆಲಸದ ವಾತಾವರಣ, ಸಿಬ್ಬಂದಿಯ ಕಾರ್ಯವೈಖರಿ ಮತ್ತು ದೈನಂದಿನ ಚಟುವಟಿಕೆಗಳನ್ನು ಹತ್ತಿರದಿಂದ ವೀಕ್ಷಿಸಿದರು.
ಶಿವಮೊಗ್ಗದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿಗಳು ದೊಡ್ಡಪೇಟೆ ಪೊಲೀಸ್ ಠಾಣೆಯೊಂದು ಹೇಗಿರುತ್ತೆ, ಪೊಲೀಸರು ಹೇಗೆ ಕೆಲಸ ಮಾಡುತ್ತಾರೆ, ಅವರ ಶಿಸ್ತು ಹೇಗಿರುತ್ತೆ ಎಂಬಿತ್ಯಾದಿ ವಿಚಾರಗಳನ್ನು ಕೇಳಿ ತಿಳಿದುಕೊಂಡರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಐಪಿಎಸ್ ಅವರ ಜೊತೆ ಮಕ್ಕಳು ಸಂವಾದ ನಡೆಸಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ಮಾದಕ ವಸ್ತುಗಳಿಂದ ದೂರವಿರಿ ಎಂದು ಸಲಹೆ ನೀಡಿದರಷ್ಟೆ ಅಲ್ಲದೆ ‘ಬೇಡ ಬ್ರೋ’ (Beda Bro) ಅಭಿಯಾನವನ್ನು ವಿದ್ಯಾರ್ಥಿಗಳು ಮುಂದುವರಿಸುವಂತೆ ಮನವಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳು ಕೇಳಿದ ಭವಿಷ್ಯದ ಪ್ರಶ್ನೆಗಳಿಗೂ ಎಸ್ಪಿ ನಿಖಿಲ್ ಬಿ ಉತ್ತರಿಸಿದರು.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
