ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಭದ್ರಾವತಿ ತಾಲ್ಲೂಕು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ. 19 ವರ್ಷದ ಸ್ವಾತಿಯನ್ನು ಕೊಲೆ ಮಾಡಿರುವ ಆರೋಪ ಸಂಬಂಧ ಪೋಷಕರು ನೀಡಿದ ದೂರಿನನ್ವಯ 20 ವರ್ಷದ ಸೂರ್ಯ ಎಂಬಾತನ ವಿರುದ್ದ ಕೊಲೆ ಆರೋಪದಡಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಯರೆಹಳ್ಳಿಯ ಕೆಂಚಮ್ಮನಹಳ್ಳಿಯ ಸಮೀಪ ಭದ್ರಾ ಕ್ಯಾನಲ್ನ ಬಳಿಯಲ್ಲಿ ಆರೋಪಿ ಸೂರ್ಯ ಯುವತಿ ಸ್ವಾತಿಯನ್ನು ಕರೆದುಕೊಂಡು ಹೋಗಿ ಇರುವೆ ಬರದಂತೆ ಹಾಕುವ ಪುಡಿಯನ್ನು ಸೇವಿಸಿದ್ದಾನೆ. ಅಲ್ಲದೆ ಆನಂತರ ಆಕೆಯನ್ನು ಬಲವಂತವಾಗಿ ಚಾನಲ್ಗೆ ದೂಡಿದ್ದಾನೆ ಎಂದು ಪೋಷಕರು ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದು ಎಸ್ಪಿಯವರು ಸ್ಪಷ್ಟಪಡಿಸಿದ್ದಾರೆ.
ಪ್ರಕರಣ ಸಂಬಂಧ ಸೂರ್ಯನನ್ನು ಅರೆಸ್ಟ್ ಮಾಡಲಾಗಿದ್ದು, ಸದ್ಯ ಕೇಸ್ನ ಬಗ್ಗೆ ಗಂಭೀರವಾಗಿ ತನಿಖೆ ಮಾಡಲಾಗುತ್ತಿದೆ. ಇನ್ನೂ ಕೇಸ್ನಲ್ಲಿ ಆರೋಪಿಯ ತಂದೆಯ ಪಾತ್ರವೂ ಇದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆಯು ಎನ್ಕ್ವೈರಿ ಮಾಡಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆಯ ನಂತರ ಸ್ಪಷ್ಟಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Swathi Death Case sp mithunkumar statement