ಕ್ರೈಂ ಹೆಚ್ಚಾಯ್ತ! ಹಾಸ್ಟೆಲ್ ವಿದ್ಯಾರ್ಥಿಗೆ ಜೀವಭಯ ತಂದಿಟ್ಟ ದುಷ್ಕರ್ಮಿಗಳು!
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 08 2025: ಶಿವಮೊಗ್ಗ ಸಿಟಿಯಲ್ಲಿ ಕ್ರೈಂ ಜಾಸ್ತಿಯಾಗುತ್ತಿದೆ ಎನ್ನುವ ಆರೋಪಕ್ಕೆ ಇನ್ನೊಂದು ಘಟನೆ ಸೇರ್ಪಡೆಯಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್ ಲಿಮಿಟ್ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರ ಹಿಡಿದು ಹೆದರಿಸಿ ಬೆದರಿಸಲಾಗಿದೆ. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ನಿನ್ನೆ ದಿನ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು, ಖಾಸಗಿ ಹಾಸ್ಟೆಲ್ನ ವಿದ್ಯಾರ್ಥಿಯೊಬ್ಬನಿಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಆತನಿಗೆ ಜೀವಭಯ ಒಡ್ಡಿದ್ದಾರೆ. ಸದ್ಯ ಘಟನೆ ಸಂಬಂಧ … Read more