ನಾಗೋಡಿ ಬಳಿ ವಿದ್ಯುತ್​ ಕಂಬಕ್ಕೆ ಗುದ್ದಿದ ತಮಿಳುನಾಡಿನ ಟೂರಿಸ್ಟ್​ ಬಸ್​! ವಾರದಲ್ಲಿ ಎರಡನೇ ಘಟನೆ!

Tamil Nadu bus hits electric pole near Nagodi The second event of the week!ನಾಗೋಡಿ ಬಳಿ ವಿದ್ಯುತ್​ ಕಂಬಕ್ಕೆ ಗುದ್ದಿದ ತಮಿಳುನಾಡಿನ ಬಸ್​! ವಾರದಲ್ಲಿ ಎರಡನೇ ಘಟನೆ!

ನಾಗೋಡಿ ಬಳಿ ವಿದ್ಯುತ್​ ಕಂಬಕ್ಕೆ ಗುದ್ದಿದ ತಮಿಳುನಾಡಿನ ಟೂರಿಸ್ಟ್​ ಬಸ್​! ವಾರದಲ್ಲಿ ಎರಡನೇ ಘಟನೆ!

KARNATAKA NEWS/ ONLINE / Malenadu today/ Aug 4, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು  ನಿಟ್ಟೂರು ಸಮೀಪ ನಿನ್ನೆ ಬಸ್​ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಕೆಲದಿನಗಳ ಹಿಂದ ಸಾಗರ ತಾಲ್ಲೂಕಿನ ಗೆಣಸಿನಕುಣಿ ಬಳಿಯಲ್ಲಿ ಖಾಸಗಿ ಬಸ್​ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿತ್ತು. ಪರಿಣಾಮ ಕರೆಂಟ್​ ವಯರ್​ ಬಸ್ ಮೇಲೆಯೆ ಬಿದ್ದಿತ್ತು. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. 

ಇದರ ಬೆನ್ನಲ್ಲೆ ನಿನ್ನೆ  ನಿಟ್ಟೂರು ಸಮೀಪ ನಾಗೋಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ತಮಿಳುನಾಡಿನ ವಂದವಾಸಿಯಿಂದ ಬಂದಿದ್ದ ಬಸ್​ ಹುಂಚಾದ ಮೂಲಕ ಸಾಗಿ ಕೊಲ್ಲೂರು ಕಡೆಗೆ ಹೋಗುತ್ತಿತ್ತು. ದನವೊಂದಕ್ಕೆ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ . ಅದೃಷ್ಟಕ್ಕೆ ಯಾವುದೇ ಅಪಾಯ ಸಂಭವಿಸಲಿಲ್ಲ. ಬಸ್​ನಲ್ಲಿ 51 ಜನರಿದ್ದರು. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



ಇನ್ನಷ್ಟು ಸುದ್ದಿಗಳು 



 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು