ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ

Tejaswini Ananth Kumar attends BJP event in Shivamogga

ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ
ಶಿವಮೊಗ್ಗಕ್ಕೆ ಬಂದ ತೇಜಸ್ವಿನಿ ಅನಂತಕುಮಾರ್ ! ಕುತೂಹಲ ಮೂಡಿಸಿದ ಭೇಟಿ

Shivamogga/  ಶಿವಮೊಗ್ಗಕ್ಕೆ ಇವತ್ತು ಬಿಜೆಪಿಯ ಹಿರಿಯ ಮುಖಂಡರಾಗಿದ್ದ ದಿವಂಗತ ಅನಂತಕುಮಾರ್​ರವರ ಪತ್ನಿ ತೇಜಸ್ವಿನಿ ಅನಂತಕುಮಾರ್​ರವರು  ಆಗಮಿಸಿದ್ದು ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು.  ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ಧಾರೆ. 

ನಗರದ ಕಲ್ಯಾಣ ಮಂದಿರವೊಂದರಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಪಕ್ಷಕ್ಕೆ ಕೇವಲ ಒಂದೇ ಸ್ಥಾನ ಇತ್ತು. ಅದು ಶಿವಮೊಗ್ಗದಿಂದ ಸಿಕ್ಕಿತ್ತು. ಪಕ್ಷಕ್ಕೆ ಕಚೇರಿ ಇರಲಿಲ್ಲ, ವಾಹನ ಇರಲಿಲ್ಲ, ಯಾವುದೇ ಸೌಲಭ್ಯಗಳು ಇಲ್ಲದಿದ್ದಾಗ ನಮ್ಮ ಪಕ್ಷದ ಹಿರಿಯರು ಸಂಘಟನಾ ಚಾತುರ್ಯದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಇದು ಕೇವಲ ಅದೃಷ್ಟದಿಂದ ಆಗಿದ್ದಲ್ಲ. ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಹೆಮ್ಮರವಾಗಿ ಬೆಳೆದಿದೆ ಎಂದರು.

ವಿಪಕ್ಷಗಳು ಕಡ್ಡಿಯನ್ನು ಗುಡ್ಡ ಮಾಡಿ ನಿರಂತರ ಅಪಪ್ರಚಾರ ಮಾಡುತ್ತಿರುತ್ತಾರೆ. ಐರಾವತ ಕೂಡ ಅಡಿ ಇಡುವಾಗ ತಪ್ಪುತ್ತದೆ. ಹಾಗೆಯೇ ಅತಿಯಾದ ವಿಶ್ವಾಸದಿಂದ ತಪ್ಪು ಆಗದ ರೀತಿಯಲ್ಲಿ ಗಮನ ಕೊಡಬೇಕು ಎಂದು ಸಲಹೆ ನೀಡಿದ್ರು.ಮತದಾರರಿಗೆ ಅನುಕೂಲವಾಗುವ ಪ್ರಣಾಳಿಕೆಯನ್ನು ಸಿದ್ಧಪಡಿಸಬೇಕು. ಪ್ರತಿಯೊಂದು ಅಂಕಿ-ಅಂಶಗಳು, ಪಾರದರ್ಶಕತೆ, ನಾವೀನ್ಯ ಸಂಗತಿಗಳ ಅಳವಡಿಕೆ, ಪ್ರಧಾನಿ ಮೋದಿಯವರ ಕಾರ್ಯವೈಖರಿ, ಡಬಲ್ ಇಂಜಿನ್ ಸರ್ಕಾರದಿಂದ ಆಗುವ ಲಾಭ ಎಲ್ಲವನ್ನೂ ಜನರಿಗೆ ತಿಳಿಸಬೇಕು ಎಂದು ಸಲಹೆ ನೀಡಿದ್ರು

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga