ಚೋರಡಿಯಲ್ಲಿ ಭೀಕರ ಅಪಘಾತ/ ಇಷ್ಟಕ್ಕೂ ಹೇಗಾಯ್ತು ಆಕ್ಸಿಡೆಂಟ್ ? ಪ್ರತ್ಯಕ್ಷದರ್ಶಿ ಹೇಳಿದ್ದೇನು?
Terrible accident in Choradi/ After all, how did the accident happen? What did the eyewitness say?

KARNATAKA NEWS/ ONLINE / Malenadu today/ May 11, 2023 GOOGLE NEWS
ಚೋರಡಿಯ ಬಳಿ ನಡೆದ ಅಪಘಾತದ ಘಟನೆಯನ್ನು ಪ್ರತ್ಯಕ್ಷ ದರ್ಶಿ ಹಾಗು ಗಾಯಾಳು ಒಬ್ಬರು ವಿವರಿಸಿದ್ದಾರೆ ಅವರು ಹೇಳುವ ಪ್ರಕಾರ, ಶಿಕಾರಿಪುರದಿಂದ ಬರುತ್ತಿದ್ದ ಬಸ್ ಸಂಜೆ ಏಳು ಗಂಟೆಯೊಳಗೆ ಶಿವಮೊಗ್ಗ ತಲುಪಬೇಕಿತ್ತಂತೆ. ಆ ಕಾರಣಕ್ಕೆ ಹಿತ್ಲಾ ದಾಟುತ್ತಲೇ ಚಾಲಕ ಓವರ್ ಸ್ಪಿಡ್ ನಲ್ಲಿ ಬಸ್ ಚಲಾಯಿಸಿದ್ದಾನೆ. ಕುಮದ್ವತಿ ಸೇತುವೆಯ ಬಳಿ ಓವರ್ ಟೇಕ್ ಮಾಡುತ್ತಿದ್ದಾಗ ಎದುರಿನಿಂದ ಇನ್ನೊಂದು ಬಸ್ ಬಂದಿದೆ. ಗಾಡಿ ಕಂಟ್ರೋಲ್ಗೆ ಸಿಗಲಿಲ್ಲ. ಎದುರಿನ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಆಕ್ಸಿಡೆಂಟ್ ಆಗಿದೆ ಎನ್ನುತ್ತಾರೆ.
ಅತಿವೇಗ ಅಪಾಯಕಾರಿ ಎಂದು ಗೊತ್ತಿದ್ದರೂ ಖಾಸಗಿ ಬಸ್ ಗಳು ತಮ್ಮ ರೂಟ್ ಟೈಮಿಂಗ್ಸ್ನ್ನ ಹೇಗಾದರೂ ರೀಚ್ ಮಾಡಬೇಕು ಎಂಬ ಕಾರಣಕ್ಕೆ ಓವರ್ ಸ್ಪೀಡ್ನಲ್ಲಿ ಚಲಾಯಿಸುವುದು ಹೊಸದೇನಲ್ಲ . ಇದರ ಪರಿಣಾಮ ಎನಾಗುತ್ತದೆ ಎಂಬುದಕ್ಕೆ ಇವತ್ತಿನ ಘಟನೆ ಸಾಕ್ಷಿಯಾಗಿದೆ.
ಚೋರಡಿಯ ಬಳಿ ನಡೆದ ಅಪಘಾತದ ಘಟನೆಯನ್ನು ಪ್ರತ್ಯಕ್ಷ ದರ್ಶಿ ಹಾಗು ಗಾಯಾಳು ಒಬ್ಬರು ವಿವರಿಸಿದ್ದಾರೆ#ShivamoggaNews #shivamogga #Shimoga #MalnadNews #LocalNews #KannadaNewsWebsite #LatestNews #todaynewsheadlinesofworld, #newstoday #kannadaonlinenews pic.twitter.com/GeIx4RXpoi — malenadutoday.com (@CMalenadutoday) May 11, 2023
Read/ Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು?
ಇನ್ನೂ ಘಟನೆ ಬಗ್ಗೆ ವಾಟ್ಸ್ಯಾಪ್ ಮೂಲಕ ಮಾಹಿತಿ ನೀಡಿರುವ ಎಸ್ಪಿ ಮಿಥುನ್ಕುಮಾರ್ ಇದುವರೆಗೂ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹೊಸದುರ್ಗದ ತಿಪ್ಪೇಸ್ವಾಮಿ ಹಾಗು ಇನ್ನೊಬ್ಬರು ಅಪರಿಚಿತ ಪುರುಷ ಎಂದು ತಿಳಿಸಿದ್ದಾರೆ.
ಇನ್ನೂ 30 ಮಂದಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು, ನಾಲ್ವರನ್ನ ಆಯನೂರಿನ ಸಿಹೆಚ್ಸಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಅವರನ್ನು ಸಹ ಮೆಗ್ಗಾನ್ಗೆ ಶಿಪ್ಟ್ ಮಾಡಲಾಗುತ್ತಿದೆ. ಇನ್ನೂ ಮೂವರ ಸ್ಥಿತಿಯು ಗಂಭೀರವಾಗಿದ್ದು, 6 ಜನರಿಗೆ ಮೈನರ್ ಇಂಜುರಿಯಾಗಿದೆ ಎಂದು ತಿಳಿಸಿದ್ದಾರೆ.
Read/ Kichcha Sudeepa/ ನಟ ಸುದೀಪ್ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
Malenadutoday.com Social media