ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಬಳಿ ಭೀಕರ ಅಪಘಾತ! ಭದ್ರಾವತಿಯ ಯುವತಿ ಸಾವು

Malenadu Today
MALENADUTODAY.COM |SHIVAMOGGA NEWS
ಶಿವಮೊಗ್ಗ ಜಿಲ್ಲೆಸಾಗರ ತಾಲ್ಲೂಕಿನ ಆನಂದಪುರ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಇಲ್ಲಿನ ನೇದರವಳ್ಳಿ  ಸಮೀಪ ಸ್ಕೂಟಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಯುವತಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಯುವತಿಯೊಬ್ಬಳು ಸ್ಕೂಟಿಯಲ್ಲಿ ತೆರಳುತ್ತಿದ್ದಳು. ಈ ವೇಳೇ ಸಾಗರದ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿಯಾಗಿದೆ. ಮೃತ ಯುವತಿಯನ್ನು ಭದ್ರಾವತಿ ಮೂಲದ ಶೃತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಮಹಜರ್ ನಡೆಸಿದ್ದಾರೆ. 

ಜಿಲ್ಲಾ ಜಂಕ್ಷನ್ ನಡೆದಿದ್ದು ಆಕ್ಸಿಡೆಂಟ್! ಬಯಲಾಗಿದ್ದು ಕೊಲೆ ಹಾಗೂ ದರೋಡೆ ಕೇಸ್!? ದ್ವೇಷ ಹೀಗೂ ತೀರಿಸಿಕೊಳ್ಳುತ್ತಾರಾ? ವಿಚಿತ್ರ ಕ್ರೈಂ ಕಥೆ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

Share This Article