ಹೊಸನಗರ, ಭದ್ರಾವತಿ ಈ ಗ್ರಾಮಗಳಲ್ಲಿ ಶಸ್ತ್ರಾಸ್ತ್ರಗಳನ್ನ ಪೊಲೀಸ್ ಸ್ಟೇಷನ್ಗೆ ನೀಡಲು ಜಿಲ್ಲಾಡಳಿತ ಸೂಚನೆ
The district administration has instructed to hand over the weapons to the police station in Hosanagara and Bhadravathi villages.
MALENADUTODAY.COM | SHIVAMOGGA | #KANNADANEWSWEB
ಗ್ರಾಮ ಪಾಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಕಾರಣ ಆ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಯ ಸಾರ್ವಜನಿಕರ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.
BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿಪುರ-12, ನಾಗೋಡಿ(ನಿಟ್ಟೂರು)-18 ಹಾಗೂ ಭದ್ರಾವತಿ ತಾಲ್ಲೂಕಿನ ಯಡೇಹಳ್ಳಿ-09 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಠೇವಣಿಯಲ್ಲಿ ಇಡಲಾದ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಆಯುಧ ಪರವಾನಿಗೆದಾರರಿಗೆ ಸೂಕ್ತ ರಶೀದಿಯನ್ನು ತಪ್ಪದೇ ನೀಡುವುದು. ಈ ಆಯುಧಗಳನ್ನು ಚುನಾವಣಾ ಫಲಿತಾಂಶವನ್ನು ಘೋಷಿಸಿದ ನಂತರ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹೊಂದಿರುಗಿಸಲಾಗುವುದು.
ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಅಧಿಕೃತ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಅವರು ತಿಳಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com