ಪ್ರಚಾರಕ್ಕೆ ಮಕ್ಕಳ ಬಳಕೆ! ಶಿವಮೊಗ್ಗ ಗ್ರಾಮಾಂತರ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಎಫ್​ಐಆರ್

The use of children for election campaigning! FIR against two candidates from Shivamogga Rural and Shivamogga City constituencies

ಪ್ರಚಾರಕ್ಕೆ ಮಕ್ಕಳ ಬಳಕೆ!  ಶಿವಮೊಗ್ಗ ಗ್ರಾಮಾಂತರ  ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಎಫ್​ಐಆರ್

KARNATAKA NEWS/ ONLINE / Malenadu today/ May 4, 2023 GOOGLE NEWS

 ಶಿವಮೊಗ್ಗ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಸಂಬಂಧ ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ಹಾಗೂ ಕುಂಸಿ ಪೊಲೀಸ್ ಸ್ಟೇಷನ್​  ನಲ್ಲಿ ಎಫ್​ಐಆರ್​ ದಾಖಲಾಗಿದೆ. 

 

ಪ್ರಕರಣ ಒಂದು 

ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ  ಪ್ಲೈಯಿಂಗ್​ ಸ್ಕ್ವ್ಯಾಡ್​ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಪ್ರಕರಣ ಎರಡು

ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ಲೈಯಿಂಗ್​ ಸ್ಕ್ವ್ಯಾಡ್​  ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 


ಶಿವಮೊಗ್ಗಕ್ಕೆ ಮತ್ತೆ ಬರಲಿದೆ ಮೋದಿ ಫ್ಲೈಟ್​  ಪ್ರಧಾನಿ ಕಾರ್ಯಕ್ರಮದ  ವಿವರ 

 

ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಅಂತಿಮ ಘಟ್ಟಕ್ಕೆ ಬರುತ್ತಿದೆ. ಮತದಾರರ ಮನೆ ಮನ ತಲುಪುವುದಕ್ಕೂ ಅಭ್ಯರ್ಥಿಗಳು ಬಿಡುವಿಲ್ಲದ ಓಡಾಟದಲ್ಲಿ ತೊಡಗಿದ್ದಾರೆ. ಇದರ ನಡುವೆ ಕೊನೆಕ್ಷಣದಲ್ಲಿ ಕಮಾಲ್ ಮಾಡಲು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇದೇ ಮೇ ಏಳರಂದು ಪ್ರಧಾನಿ ನರೇಂದ್ರ ಮೋದಿ ಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಪಟ್ಟಿ ಇಲ್ಲಿದೆ 

 

ರಾಜಧಾನಿ ಬೆಂಗಳೂರುನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ ನಂತರ ಆರನೇ ತಾರೀಖು ರಾತ್ರಿ, ಅಲ್ಲಿಯ ರಾಜಭವನದಲ್ಲಿ ಉಳಿದುಕೊಳ್ಳಲಿದ್ದಾರೆ. ಬಳಿಕ ಮರುದಿನ ಅಂದರೆ ಏಳನೇ ತಾರೀಖು ಭಾನುವಾರ ಬೆಂಗಳೂರು ಹೆಚ್​ಎ ಎಲ್​ ಏರ್​ಪೋರ್ಟ್​ ನಿಂದ ಹುಬ್ಬಳ್ಳಿಗೆ ಬೆಳಗ್ಗೆ ಒಂಬತ್ತು ಗಂಟೆಗೆ ಹೊರಡಲಿದ್ದಾರೆ. 

 

 10:10ಕ್ಕೆ ಹುಬ್ಬಳ್ಳಿಗೆ ಬಂದು ಅಲ್ಲಿಂದ ಬಾದಾಮಿಗೆ ತೆರಳಲಿದ್ಧಾರೆ. ನಂತರ ಮಧ್ಯಾಹ್ನ 12 ಗಂಟೆವರೆಗೂ ಬಾದಾಮಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮೋದಿ ಅಲ್ಲಿಂದ ಹಾವೇರಿಗೆ ತೆರಳಲಿದ್ದಾರೆ. ಅಲ್ಲಿ, 2 ಗಂಟೆಯುವರೆಗೂ ಇದ್ದು ಶಿವಮೊಗ್ಗಕ್ಕೆ ಬರಲಿದ್ಧಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಆಯನೂರಿನಲ್ಲಿ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ಧಾರೆ. 

ಸಮಾವೇಶ ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಜೆ 4.25 ಕ್ಕೆ ಶಿವಮೊಗ್ಗ ಏರ್​​ಪೋರ್ಟ್​  ತಲುಪಲಿದ್ಧಾರೆ. ಅಲ್ಲಿಂದ  ಮೈಸೂರಿಗೆ ತೆರಳಿ, ನಂಜನಗೂಡಿಗೆ ಪ್ರಯಾಣ ಬೆಳಸಲಿದ್ದಾರೆ. ನಂತರ ರಾತ್ರಿ ದೆಹಲಿಗೆ ವಾಪಸ್ ಆಗಲಿದ್ದಾರೆ.  

 

 

Malenadutoday.com Social media