theft case nr pura ಜೂನ್​ 28 ವೃದ್ಧೆಯ ಸರ ಅಪಹರಣ ಪ್ರಕರಣ, ಇಬ್ಬರು ಸರಗಳ್ಳರ ಬಂಧನ

This Article Written by / Prathapa thirthahalli / ಜೂನ್ 28, 2025

theft case nr pura ಆರೋಪಿಗಳಿಂಂದ ಮಾಲನ್ನು ವಶಪಡಿಸಿಕೊಂಡ ಪೊಲೀಸರು

theft case nr pura ವೃದ್ಧೆಯ ಸರ ಅಪಹರಣ ಪ್ರಕರಣ, ಇಬ್ಬರು  ಸರಗಳ್ಳರ ಬಂಧನ

theft case nr pura ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು.

ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು ವೃದ್ಧೆಯ ಕೊರಳಿನಲ್ಲಿದ್ಧ 38 ಗ್ರಾಂ ತೂಕದ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಕಳ್ಳರನ್ನು ಬಂಧಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರಿಗೆ ಕಳ್ಳರು ವಿವಿದೆಡೆ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ. ಪೊಲೀಸರು ಬಂಧಿತರಿಂದ ಭದ್ರಾವತಿಯಲ್ಲಿ ಕಳವು ಮಾಡಲಾಗಿದ್ದ ಒಂದು ಮೋಟರ್‌ ಸೈಕಲ್ ಹಾಗೂ ವಿವಿಧೆಡೆ ಕಳವು ಮಾಡಲಾಗಿದ್ದ ಒಟ್ಟು 7.50 ಲಕ್ಷ ರೂಪಾಯಿ ಮೌಲ್ಯದ 69 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 

 

theft case nr pura ಆರೋಪಿಗಳಿಂಂದ ಮಾಲನ್ನು ವಶಪಡಿಸಿಕೊಂಡ ಪೊಲೀಸರು
theft case nr pura ಆರೋಪಿಗಳಿಂಂದ ಮಾಲನ್ನು ವಶಪಡಿಸಿಕೊಂಡ ಪೊಲೀಸರು

 

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment