ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿಯೇ ನಡೆಯಿತು ಕಳ್ಳತನ! ಕಳುವಾಗಿದ್ದೇನು ?
The theft took place at the office of chikkamagaluru district in-charge minister
CHIKKAMAGALURU | Dec 16, 2023 | ಸಾಮಾನ್ಯವಾಗಿ ಕಳ್ಳತನ ಪ್ರಕರಣಗಳು ಅಷ್ಟರ ಮಟ್ಟಿಗೆ ಸುದ್ದಿ ಎನಿಸುವುದಿಲ್ಲ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಕಳ್ಳತನದ ಘಟನೆಯೊಂದು ಇದೀಗ ರಾಜ್ಯದೆಲ್ಲೆಡೆ ಸುದ್ದಿಯಾಗುತ್ತಿದೆ. ಏಕೆಂದರೆ ಈ ಕಳ್ಳತನ ನಡೆದಿರುವುದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ/
ಹೌದು, ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನವಾಗಿದೆ. ಸಚಿವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನವಾಗಿದೆ. ಅಲ್ಲದೆ ಫೈಲ್, ಖಾಸಗಿ ಡಾಕ್ಯುಮೆಂಟ್, 15 ಸಾವಿರ ಹಣ ಕಳ್ಳತನವಾಗಿದೆ ಎಂದು ವರದಿಯಾಗಿದೆ.
READ : ಶಿವಮೊಗ್ಗ ನಗರ ನಾಗರಿಕರ ಗಮನಕ್ಕೆ | ಎರಡು ದಿನ ನೀರು ಪೂರೈಕೆ ಬಂದ್ ! ಕಾರಣವೇನು ಗೊತ್ತಾ?
ಸಚಿವರ ಆಪ್ತ ಸಹಾಯಕ ಮೋಗಣ್ಣರವರು ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದರು. ಈ ನಡುವೆ ಕಳ್ಳರು ಕೈಚಳಕ ತೋರಿಸಿ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾರೆ. ಕಳ್ಳರು ಯಾರು ಎಂದು ಕಂಡು ಹಿಡಿಯೋಕೆ ಸಿಸಿ ಕ್ಯಾಮರಾಗಳು ಕೆಲಸ ಮಾಡುತ್ತಿಲ್ಲ. ಸದ್ಯ ಚಿಕ್ಕಮಗಳೂರು ನಗರ ಪೊಲೀಸರು ಕೇಸ್ ಮಾಡಿದ್ದಾರೆ.