THIRTHAHALLI

ತೀರ್ಥಹಳ್ಳಿ: 8 ಮೂಟೆ, 4 ಲಕ್ಷದ ಮಾಲು, ಒಂದೇ ತಿಂಗಳಲ್ಲಿ ಗಾಡಿ ಸಮೇತ ಇಬ್ಬರು ಅರೆಸ್ಟ್​, ಏನಿದು ಪ್ರಕರಣ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ: ರಂಜದಕಟ್ಟೆ ಗ್ರಾಮದಲ್ಲಿ ಬೇಯಿಸಿ ಒಣಗಿಸಿದ್ದ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

Thirthahalli ಘಟನೆಯ ವಿವರ

ಈ ಹಿಂದೆ ಅಂದರೆ ಜೂನ್ ತಿಂಗಳಲ್ಲಿ ರಂಜದಕಟ್ಟೆ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸುಮಾರು 8 ಚೀಲ ಅಡಿಕೆಯನ್ನು ಬೇಯಿಸಿ ಒಣಗಿಸಿದ್ದರು. ಆದರೆ ಯಾರೋ ಕಳ್ಳರು ಮಧ್ಯಾಹ್ನದ ವೇಳೆ 09 ಕ್ವಿಂಟಾಲ್ ತೂಕದ, ಸುಮಾರು 4,50,000 ರೂಪಾಯಿ ಮೌಲ್ಯದ ಅಡಿಕೆಯನ್ನು ಕದ್ದು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ದೂರುದಾರರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಬಿಜಾಪುರದ ಮಹಬೂಬಸಾಬ ದಾದಾಪೀರ್ ಹಾಗೂ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಹುಲಗೂರು ಗ್ರಾಮದ ನಿವಾಸಿ ಕಾಸಿಮ ಸಾಬ ಬೇಪಾರಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಕಳವು ಮಾಡಲಾಗಿದ್ದ 4,50,000/- ರೂ. ಮೌಲ್ಯದ 9 ಕ್ವಿಂಟಾಲ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಕಳ್ಳತನಕ್ಕೆ ಬಳಸಿದ್ದ 6,00,000/- ರೂ. ಮೌಲ್ಯದ ಅಶೋಕ್ ಲೈಲಾಂಡ್ ದೋಸ್ತ್ ಪ್ಲಸ್ ಗೂಡ್ಸ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Thirthahalli Arecanut Theft Case Solved

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.