ತೀರ್ಥಹಳ್ಳಿ: ತೀರ್ಥಹಳ್ಳಿ-ಕೋಣಂದೂರು-ಅನಂತಪುರ ಮಾರ್ಗದ ಹಿರೇಸರ ಸಮೀಪ ಶನಿವಾರ ರಸ್ತೆಯಲ್ಲಿ ಬೃಹತ್ ಕಾಳಿಂಗ ಸರ್ಪ ಅಡ್ಡ ಬಂದ ಪರಿಣಾಮ, ಚಾಲಿ ಅಡಿಕೆ ತುಂಬಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ.
ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್ ಆಗಿ ಎಷ್ಟಿದೆ!? ಏನಾಗ್ತಿದೆ?
ಸಾಗರದಿಂದ ಕಾರ್ಕಳದತ್ತ ಸಾಗುತ್ತಿದ್ದ ಈ ವಾಹನಕ್ಕೆ ಗುಡ್ಡೆಕೊಪ್ಪ ಸಮೀಪದ ಹಿರೇಸರದಲ್ಲಿ ಇದ್ದಕ್ಕಿದ್ದಂತೆ ಕಾಳಿಂಗ ಸರ್ಪ ಎದುರಾಗಿದೆ. ಹಾವನ್ನು ಕಂಡು ಆತಂಕಗೊಂಡ ಚಾಲಕ, ಹಾವಿನ ಜೀವ ಉಳಿಸುವ ಧಾವಂತದಲ್ಲಿ ಒಮ್ಮೆಲೇ ಬ್ರೇಕ್ ಹಾಕಿದ್ದಾರೆ. ಈ ವೇಳೆ ಭಾರೀ ಪ್ರಮಾಣದ ಅಡಿಕೆ ಲೋಡ್ ಹೊಂದಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ.
ಅದೇ ಸಮಯದಲ್ಲಿ ಕಾರ್ಯನಿಮಿತ್ತ ಆ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಮಾಜಿ ಸಚಿವರು ಹಾಗೂ ಶಾಸಕರಾದ ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಕಾರನ್ನು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು. ಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿದ ಶಾಸಕರು, ಅವರಿಗೆ ಯಾವುದೇ ಗಾಯಗಳಾಗದಿರುವುದನ್ನು ಖಚಿತಪಡಿಸಿಕೊಂಡು ಧೈರ್ಯ ತುಂಬಿದರು.
ಅದೃಷ್ಟವಶಾತ್ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
Thirthahalli King Cobra Crosses Road, Areca Truck Flip

