ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್! ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್​ ಸತ್ಯಾಗ್ರಹ! ಕಾರಣವೇನು? ವಿವರ ಇಲ್ಲಿದೆ

Thirthahalli Congress leader Kimmane Ratnakar leads congress party protest in Shivamogga

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್!   ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್​ ಸತ್ಯಾಗ್ರಹ!  ಕಾರಣವೇನು? ವಿವರ ಇಲ್ಲಿದೆ
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್! ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್​ ಸತ್ಯಾಗ್ರಹ! ಕಾರಣವೇನು? ವಿವರ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ  ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆದಿರುವುದನ್ನ ಖಂಡಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆದಿದೆ.ಈ ವೇಳೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್​, ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ 15 ಜನ ಗ್ರಾಪಂ ಸದಸ್ಯರಿದ್ದು ಅದರಲ್ಲಿ 9 ಜನ ಗ್ರಾಪಂ ಸದಸ್ಯರು ಕಾಂಗ್ರೆಸ್ ನವರಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪಿಡಿಒರವರು ಹಲ್ಲೆ ಮಾಡಿದ್ದಾರೆ, ಆದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು. 

READ | ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕಣ್ಣೀರು ಹಾಕಿದ್ದೇಕೆ? ವಿಡಿಯೋ ವರದಿ

ತೀರ್ಥಹಳ್ಳಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಕಾಂಗ್ರೆಸ್​ ಬೆಂಬಲಿತ ಗ್ರಾಮಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಕೆಲವು ಹಲ್ಲೆ ಪ್ರಕರಣಗಳಿಗೆ ವಿಡಿಯೋ ಸಾಕ್ಷ್ಯಗಳಿವೆ. ಈ ಬಗ್ಗೆ ಸಿಇಒಗೆ ಎಂಟು ತಿಂಗಳ ಹಿಂದೆಯೇ ದೂರು ನೀಡಿದ್ದರೂ ಸಹ ಇಲ್ಲವರೆಗೂ ಕ್ರಮಕೈಗೊಂಡಿಲ್ಲ. ಮೇಲಾಗಿ, ದೂರು ನೀಡಿದ್ದರೂ ಸಹ ಅದೇ ಅಧಿಕಾರಿಗಳು ಅದದೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.ಆ ಅಧಿಕಾರಿಗಳು ಅಷ್ಟೊಂದು ಉತ್ತಮವಾಗಿ ಕೆಲಸ ಮಾಡುತ್ತಿರುವುದೇ ಆದಲ್ಲಿ ಅಂತಹ ಅಧಿಕಾರಿಗಳನ್ನು ಆರಗ ಜ್ಞಾನೇಂದ್ರರವರು ತಮ್ಮ ಪಿಎ ಆಗಿ ನೇಮಿಸಿಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದ್ರು. 

ಇದೇ ವೇಳೆ, ತೀರ್ಥಹಳ್ಳಿಯಲ್ಲಿ ಹಲ್ಲೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವರೆಗೂ ನಾನು ಇಲ್ಲಿಯೇ ಪ್ರತಿಭಟನೆ ಮುಂದುವರೆಸುತ್ತೇನೆ. ನ್ಯಾಯ ಪಡೆದೇ ತೀರ್ಥಹಳ್ಳಿಗೆ ಹೋಗುತ್ತೇನೆ, ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ಸಹ ಸಿದ್ಧನಾಗಿದ್ದೇನೆ ಎಂದರು. 

READ |ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

READ |BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್​ ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga shivamogg