thirthahalli Rains ತೀರ್ಥಹಳ್ಳಿ: ತಾಲೂಕಿನಾದ್ಯಂತ ಭಾನುವಾರ ಸುರಿದ ಗಾಳಿ ಸಹಿತ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ಬುಡಸಮೇತ ಮನೆ ಮೇಲೆ ಬಿದ್ದಿರುವ ಘಟನೆ ತಾಲೂಕಿನ ಕೆರೋಡಿಯಲ್ಲಿ ಸಂಭವಿಸಿದೆ.
ಶಿವಮೊಗ್ಗ: ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಬೃಹತ್ ಪ್ರತಿಭಟನೆ, ಸಾವಿರಾರು ವಿದ್ಯಾರ್ಥಿಗಳು ಭಾಗಿ
ನಿನ್ನೆ ಸಂಜೆ 4 ಗಂಟೆ ವೇಳೆಗೆ, ಗಾಳಿಯ ರಭಸಕ್ಕೆ ಗ್ರಾಮದ ಜಯರಾಮ್ ಎಂಬುವವರ ಮನೆಯ ಮೇಲೆ ಬೃಹತ್ ಗಾತ್ರದ ರಂಜದ ಮರವೊಂದು ಬಿದ್ದಿದೆ. ಪರಿಣಾಮ ಮನೆಯ ಪೋರ್ಟಿಕೋ ಭಾಗವು ಸಂಪೂರ್ಣವಾಗಿ ಶಿಥಿಲಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದರು, ಆದರೆ ಮರ ಬೃಹದ್ ಗಾತ್ರದಾಗಿದ್ದರಿಂದ ಮರವನ್ನು ತೆರವು ಗೊಳಿಸಲು ಹರಸಾಹಸವೇ ಪಡಬೇಕಾಯಿತು. ನಂತರ ಮರ ಕಟಾವು ಯಂತ್ರದ ಸಹಾಯದಿಂದ ಬಿದ್ದ ಮರವನ್ನು ತೆರವುಗೊಳಿಸಿದರು.
ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೇ ಸಂಬಂಧ ಪಟ್ಟ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದರು.




