ನೇಣು ಬಿಗಿದುಕೊಂಡು ತೀರ್ಥಹಳ್ಳಿಯ ಯುವಕ ಆತ್ಮಹತ್ಯೆ! ಕಾರಣವೇನು? ಪೊಲೀಸ್ ಇಲಾಖೆಗೆ ವಿರುದ್ಧವೇಕೆ ಕೇಳಿಬರ್ತಿದೆ ದೂರು?
Thirthahalli youth commits suicide by hanging himself What is the reason? Why is there a complaint against the police department?
KARNATAKA NEWS/ ONLINE / Malenadu today/ Jul 8, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಟ್ಟೆಹಕ್ಲಿನಲ್ಲಿ 22 ವರ್ಷದ ಯುವಕನೊಬ್ಬ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮೃತ ಯುವಕ ಸ್ಥಳೀಯ ನಿವಾಸಿ ಮಿಥುನ್ ಶೆಟ್ಟಿ ಎಂದು ಗೊತ್ತಾಗಿದೆ. ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಈತನ ಸಾವಿಗೆ ಪೊಲೀಸ್ ಇಲಾಖೆಯ ಅಧಿಕೃತ ಕಾರಣ ಗೊತ್ತಾಗಿಲ್ಲ., ಸ್ಥಳೀಯರು ಕ್ರಿಕೆಟ್ ಬೆಟ್ಟಿಂಗ್ನ ಸಾಲವೇ ಆತ್ಮಹತ್ಯೆಗೆ ಕಾರಣ ಎನ್ನುತ್ತಿದ್ದಾರೆ. ಪೊಲೀಸರು ಅಸ್ವಾಭಾವಿಕ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿಯೇ ಸದ್ದು ಮಾಡುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾತನಾಡುತ್ತಿಲ್ಲ ಎಂದು ಸ್ಥಳೀಯರು ದೂರಿದ್ಧಾರೆ.
ಯಶವಂತಪುರ-ಶಿವಮೊಗ್ಗ ರೈಲಿಗೆ ಸಿಲುಕಿಗೆ ತುಮಕೂರು ಮೂಲದ ಟ್ರೈನಿ ಪೊಲೀಸ್ ಕಾಲು ಕಟ್! ಶಿವಮೊಗ್ಗದ ಮಹಾದೇವಿ ಟಾಕೀಸ್ ಬಳಿಯ ನಿಲ್ದಾಣದಲ್ಲಿ ಘಟನೆ
ಯಶವಂತಪುರ – ಶಿವಮೊಗ್ಗ (16581/Yesvantpur - Shivamogga Town Express) ರೈಲಿಗೆ ಸಿಲುಕಿ ತರಭೇತಿಯಲ್ಲಿರುವ ಪೊಲೀಸ್ ಸಿಬ್ಬಂದಿಯ ಕಾಲು ತುಂಡಾಗಿದೆ. ಈ ಘಟನೆ ಶಿವಮೊಗ್ಗ ನಗರದ ಮಹಾದೇವಿ ಟಾಕೀಸ್ ಬಳಿ ಇರುವ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಇವತ್ತು ಮಧ್ಯಾಹ್ನ ನಡೆದ ಘಟನೆಯಲ್ಲಿ ನಾಗರಾಜ್ ಎಂಬವರ ಕಾಲು ಕಟ್ ಆಗಿದ್ದು, ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ನಡೆದಿದ್ದೇಗೆ?
ಯಶವಂತಪುರದಿಂದ ಬರುತ್ತಿದ್ದ ಟ್ರೈನ್ನಲ್ಲಿ ನಾಗರಾಜ್ ರವರು ಆಗಮನಿಸಿದ್ದಾರೆ. ನಿಲ್ದಾಣದ ಬಳಿ ಅವರು ಇಳಿಯುವಾಗ ಎಡವಿ ಟ್ರೈನ್ನ ಚಕ್ರಕ್ಕೆ ಕಾಲು ಸಿಲುಕಿಕೊಂಡಿದೆ. ತಕ್ಷಣವೇ ಅಲ್ಲಿದ್ದವರು ಬಂದು ನಾಗರಾಜ್ರನ್ನ ರಕ್ಷಿಸಿದ್ಧಾರೆ. ಮೂಲತಃ ತುಮಕೂರಿನ ಕುಣಿಗಲ್ ಮೂಲದವರಾದ ನಾಗರಾಜ್, ಕಡೂರಿನಲ್ಲಿರುವ ಪೊಲೀಸ್ ತರಭೇತಿ ಸಂಸ್ಥೆಯಲ್ಲಿ ತರಭೇತಿ ಪಡೆಯುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.
ಮಳೆಗಾಲದಲ್ಲಿ ಅಡಿಕೆ ಲಾಟರಿ ! 82 ಸಾವಿರದ ಗಡಿದಾಟಿದ ಸರಕು! ಎಷ್ಟಿದೆ ರೇಟು!?
ಶಿವಮೊಗ್ಗ: ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆಗೆ ಉತ್ತಮ ದರ ಲಭ್ಯವಾಗುತ್ತಿದೆ. ಕಾದಿದ್ದು ಅಡಿಕೆ ಮಾರುವವರಿಗೆ ಭರ್ಜರಿ ಲಾಭ ತಂದುಕೊಡ್ತಿದೆ. ಶುಕ್ರವಾರದ ಮಾರುಕಟ್ಟೆ ದರದಲ್ಲಿ ಗರಿಷ್ಠ ₹82,496ಕ್ಕೆ ಅಡಿಕೆ ಮಾರಾಟವಾಗಿದೆ. ಕನಿಷ್ಠ ಅಂದರೆ ₹50,599 ದರ ದೊರೆತಿದೆ. ಸರಕು ಅಡಿಕೆಗೆ ಈ ದರ ದೊರಕ್ಕಿದ್ದು, ರಾಶಿ ಹಾಗೂ ಬೆಟ್ಟೆಗೆ ಕ್ವಿಂಟಾಲ್ಗೆ ಅರ್ಧಲಕ್ಷ ಸಿಗುತ್ತಿದೆ.
ಕಳೆದ ತಿಂಗಳು ಕ್ವಿಂಟಲ್ಗೆ ₹80 ಸಾವಿರದ ಆಸುಪಾಸಿನಲ್ಲಿತ್ತು. ಆನಂತರ ಜುಲೈ ಆರಂಭದಲ್ಲಿ ಅಡಿಕೆ ದರ ಕ್ವಿಂಟಾಲ್ ₹76,000 ಆಸುಪಾಸು ತಲುಪಿತ್ತು . ಇದೀಗ ಮತ್ತೆ ಅಡಿಕೆ ದರದಲ್ಲಿ ಮತ್ತೆ ಏರಿಕೆ ಕಂಡಿದೆ.
ಯಾವ್ಯಾವುದಕ್ಕೆ ಎಷ್ಟೆಷ್ಟಿದೆ ರೇಟು?
ಸರಕು ಕ್ವಿಂಟಾಲ್ಗೆ ಗರಿಷ್ಟ ₹82496 ಕನಿಷ್ಟ ₹50599
ಬೆಟ್ಟೆ ಅಡಿಕೆಕ್ವಿಂಟಲ್ಗೆ ಗರಿಷ್ಠ ₹55382, ಕನಿಷ್ಠ ₹45000
ರಾಶಿ ಅಡಿಕೆ ಗರಿಷ್ಠ ₹56299 ಹಾಗೂ ಕನಿಷ್ಠ ₹39201
ಗೊರಬಲು ಗರಿಷ್ಠ ₹42,399 ಹಾಗೂ ಕನಿಷ್ಠ ₹18,000