SHIVAMOGGA NEWS TODAY

ವಾಲಿಬಾಲ್: ರಾಷ್ಟ್ರ ಮಟ್ಟಕ್ಕೆ ತೀರ್ಥಹಳ್ಳಿಯ ಶಬರೀಶ್ ಗೌಡ ಆಯ್ಕೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ಹಾರೆಕೊಪ್ಪದ ಯುವ ಪ್ರತಿಭೆ ಶಬರೀಶ್ ಗೌಡ ಅವರು ರಾಷ್ಟ್ರ ಮಟ್ಟದ ಯೂಥ್ ನ್ಯಾಷನಲ್ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕ ತಂಡದ ಪರವಾಗಿ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ ; ಮಿಸ್ ಮಾಡ್ಕೋಬೇಡಿ! 

ತೀರ್ಥಹಳ್ಳಿಯ ದಬ್ಬಣಗದ್ದೆ ಸಮೀಪದ ಹಾರೆಕೊಪ್ಪ ನಿವಾಸಿಗಳಾದ ರಂಜಿತಾ ಮತ್ತು ಜಗದೀಶ್ ದಂಪತಿಯ ಪುತ್ರನಾದ ಶಬರೀಶ್, ತೀರ್ಥಹಳ್ಳಿಯ ಪ್ರತಿಷ್ಠಿತ ವಾಗ್ದೇವಿ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮುಗಿಸಿದವರು. ಪ್ರಸ್ತುತ ಬೆಂಗಳೂರು ಜಯನಗರದ ಸುರಾನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಾರೆ.

ಶಬರೀಶ್ ಗೌಡ ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಕಠಿಣ ಪರಿಶ್ರಮ ಪಟ್ಟಿದ್ದರು. ಇವರ ಕೌಶಲವನ್ನು ಗುರುತಿಸಿದ ಕ್ರೀಡಾ ಇಲಾಖೆಯು ಇವರನ್ನು ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಆಯ್ಕೆ ಮಾಡಿದೆ. ಮಾರ್ಚ್ 15 ರಿಂದ 20 ರವರೆಗೆ ಒಡಿಶಾದಲ್ಲಿ ನಡೆಯಲಿರುವ ಪ್ರತಿಷ್ಠಿತ ಯೂಥ್ ನ್ಯಾಷನಲ್ ವಾಲಿಬಾಲ್ ಟೂರ್ನಿಯಲ್ಲಿ ಶಬರೀಶ್ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. 

Thirthalli Boy Represent Karnataka in Volleyball

Thirthahalli Boy Represent Karnataka in Volleyball
Thirthalli Boy Represent Karnataka in Volleyball
shivamogga car decor sun control house
shivamogga car decor sun control house
Malenadu Today ePaper PDF 03-03-2026 / ಮಲೆನಾಡು ಟುಡೆ ಜನಮನದ ಜೀವನದಿ ಈ ಪತ್ರಿಕೆಯನ್ನು ನೀವಿಲ್ಲಿ ಓದಬಹುದು! ಡೌನ್​​ಲೋಡ್​ ಮಾಡಿಕೊಳ್ಳಬಹುದು

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.