ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನೆಲ್ಲಿಸರದಲ್ಲಿ ಕಾಣೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದಿನ ಸೋಮವಾರ ಮಹಿಳೆ ನಾಪತ್ತೆಯಾಗಿದ್ದು, ಅವರ ಶವ ಕಳೆದ ಶುಕ್ರವಾರ ಪತ್ತೆಯಾಗಿದೆ. ಮನೆ ಸಮೀಪದ ಗುಡ್ಡದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ಧಾರೆ.
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೆ ತನಿಖೆಯಲ್ಲಿ ತಿಳಿದುಬರಬೇಕಿದೆ. ಈ ಘಟನೆಯ ಸಂಬಂಧ ಕಳೆದವಾರದ ಸೋಮವಾರವೆ ಕುಟುಂಬಸ್ಥರು ಕಂಪ್ಲೆಂಟ್ ಕೊಟ್ಟಿದ್ದರು. ಮಹಿಳೆಯು ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ವಾಪಸ್ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಆತಂಕಗೊಂಡಿದ್ದರು. ಆನಂತರ ಈ ಸಂಬಂಧ ಕೊಪ್ಪದಲ್ಲಿನ ಜ್ಯೋತಿಷಿಯೊಬ್ಬರ ಬಳಿ ಹೇಳಿಕೆ ಕೇಳಿದ್ದರು. ಅವರು ಮನೆಯ ಸಮೀಪವೇ ದಿಕ್ಕೊಂದನ್ನು ಸೂಚಿಸಿದ್ದರಂತೆ. ಅಲ್ಲಿಯೇ ಸಮೀಪದ ಗುಡ್ಡವೊಂದರಲ್ಲಿ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೇಸ್ ದಾಖಲಿಸಿದ್ದಾರೆ.
