ನೆರೆ ರಾಜ್ಯ ಗೋವಾ ಕ್ರೈಂ ಬ್ರಾಂಚ್ ಪೊಲೀಸರು, ಅಂತಾರಾಜ್ಯ ವೇಶ್ಯಾವಾಟಿಕೆ ಜಾಲವೊಂದನ್ನು ಬೇಧಿಸಿದ್ದಾರೆ.ಗಮನಾರ್ಹ ವಿಷಯ ಅಂದರೆ, ಈ ಪ್ರಕರಣದಲ್ಲಿ ಶಿವಮೊಗ್ಗದ ಓರ್ವ ಆರೋಪಿ ಅರೆಸ್ಟ್ ಆಗಿದ್ದಾನೆ. ಆಕ್ಷೇಪಾರ್ಹ ಹಾಗೂ ಅಶ್ಲೀಲ ವಿಷಯಗಳನ್ನು ಪ್ರಸಾರ ಮಾಡಲು ಬಳಸಲಾಗುತ್ತಿದ್ದ ವೆಬ್ಸೈಟ್ಗಳನ್ನು ಸೃಷ್ಟಿಸಿ, ಅವುಗಳನ್ನು ನಿರ್ವಹಿಸುತ್ತಿದ್ದ 3 ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ: ಬೆಂಗಳೂರು ಮೂಲದ ಪಶುವೈದ್ಯಾಧಿಕಾರಿ ಸಾವು !ನಡೆದಿದ್ದೇನು!
ಇಲ್ಲಿನ ಕ್ರೈಂ ಬ್ರಾಂಚ್ ಹಾಗೂ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಜಂಟಿಯಾಗಿ ನಡೆಸಿದ ಈ ಬೃಹತ್ ಕಾರ್ಯಾಚರಣೆಯ ಪರಿಣಾಮವಾಗಿ, ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿದ್ದ 22 ಎಸ್ಕರ್ಟ್ ವೆಬ್ಸೈಟ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಕ್ರೈಂ ಹಾಗೂ ಸೈಬರ್ ಕ್ರೈಂ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗುಪ್ತಾ ಅವರ ಮಾಹಿತಿಯಂತೆ, ಶಿವಮೊಗ್ಗ ಮೂಲದ ನಾರಾಯಣ್ ಎಂಬಾತ ಇಡೀ ಜಾಲದ ಮುಖ್ಯ ರೂವಾರಿ ಆಗಿದ್ದ. ಈತನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗೋವಾದ ನೆರುಲ್ ಮತ್ತು ಬಾರ್ಡೆಜ್ ಪ್ರದೇಶಗಳಲ್ಲಿ ದಾಳಿ ನಡೆಸಿ 3 ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕೃತ್ಯದ ಮಾಸ್ಟರ್ಮೈಂಡ್ 40 ವರ್ಷದ ನಾರಾಯಣ್, ಮಧ್ಯಪ್ರದೇಶದ ಭೋಪಾಲ್ ಮೂಲದ 33 ವರ್ಷದ ಶಹಬಾಜ್ ಹಾಗೂ ಬೀದರ್ ಮೂಲದ 36 ವರ್ಷದ ಮಂಜುನಾಥ್ ಬಂಧಿತ ಆರೋಪಿಗಳು. ಇವರಿಂದ 1 ಲ್ಯಾಪ್ಟಾಪ್ ಹಾಗೂ 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ, ನಾರಾಯಣ್ ತನ್ನ ಜಾಲವನ್ನು ಗೋವವಷ್ಟೆ ಅಲ್ಲದೆ ಬೆಂಗಳೂರು, ಹೈದರಾಬಾದ್, ಚೆನ್ನೈ, ಜೈಪುರ ಹಾಗೂ ದೆಹಲಿ ನಗರಗಳಿಗೂ ವಿಸ್ತರಿಸಿದ್ದ ಎಂಬುದುಗೊತ್ತಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಜೀವ್ಬಾ ದಳವಿ ಅವರ ನೇತೃತ್ವದಲ್ಲಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗುಪ್ತಾ ಅವರ ಉಸ್ತುವಾರಿಯಲ್ಲಿ ಈ ಪ್ರಕರಣದ ತನಿಖೆಯು ಮುಂದುವರೆದಿದೆ.
ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
