today short news : 700 ರೂ.ಗೆ 10ಕ್ಕೂ ಹೆಚ್ಚು ಸ್ಥಳಗಳಿಗೆ 1 ದಿನದ ಪ್ರವಾಸ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

ಹಂಚಿಕೊಳ್ಳಿ
WhatsApp Facebook X Telegram
Bike theft casebatteries stolen in court
Bike theft case batteries stolen in court

today short news ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯಿಂದ ಜುಲೈ 13 ರಂದು ಶಿವಮೊಗ್ಗದಿಂದ 10ಕ್ಕೂ ಹೆಚ್ಚು ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಿಗೆ ಒಂದು ದಿನದ ಪ್ರವಾಸ ಆಯೋಜಿಸಲಾಗಿದೆ. ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ (ಶಿಕಾರಿಪುರ), ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ, ತೋಗರ್ಸಿ ಮಲ್ಲಿಕಾರ್ಜುನ ದೇವಸ್ಥಾನ, ಕುಬಟೂರಿನ ಕೊಟ್ಟೂರೇಶ್ವರ ದೇವಸ್ಥಾನ, ಬನವಾಸಿ ಮಧುಕೇಶ್ವರ ದೇವಸ್ಥಾನ ಹಾಗೂ ಚಂದ್ರಗುತ್ತಿ ರೇಣುಕಾಂಬದೇವಿ ದೇವಸ್ಥಾನಗಳು ಈ ಪ್ರವಾಸದಲ್ಲಿ ಸೇರಿವೆ. 

ಬೆಳಿಗ್ಗೆ 6:30ಕ್ಕೆ ಹೊರಟು ರಾತ್ರಿ 10ರೊಳಗೆ ಹಿಂದಿರುಗುವ ಈ ಪ್ರವಾಸಕ್ಕೆ 700 ರೂ. ಶುಲ್ಕ ನಿಗದಿಪಡಿಸಲಾಗಿದೆ. ಇದರಲ್ಲಿ ಬಸ್ ಪ್ರಯಾಣ, ಊಟ ಮತ್ತು ಉಪಹಾರ ಸೇರಿದೆ. 45 ಜನರಿಗೆ ಮಾತ್ರ ಅವಕಾಶವಿದ್ದು, ಆಸಕ್ತರು ಮಹದೇವಸ್ವಾಮಿ (ದೂರವಾಣಿ: 9448844380) ಅವರನ್ನು ಸಂಪರ್ಕಿಸಬಹುದು.

today short news : ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಆರಗ ದಿಢೀರ್ ಭೇಟಿ

ತೀರ್ಥಹಳ್ಳಿ: ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಪ್ರಮುಖ ವೈದ್ಯರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ, ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ (ಜೂನ್ 30, 2025) ಜೆಸಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಮಾಹಿತಿ ಪಡೆದರು. ಈ ವೇಳೆ ಆರೋಗ್ಯ ಇಲಾಖೆ ಕಮಿಷನರ್ ಹರ್ಷಗುಪ್ತರಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಜೆಸಿ ಆಸ್ಪತ್ರೆಯಲ್ಲಿ ಹೆಚ್ಚು ಶಸ್ತ್ರಚಿಕಿತ್ಸೆಗಳು ನಡೆಯುತ್ತಿದ್ದು, ಹಿರಿಯ ನರ್ಸ್‌ಗಳ ವರ್ಗಾವಣೆಯಾದರೆ ಆಸ್ಪತ್ರೆಯ ಕಾರ್ಯನಿರ್ವಹಣೆಗೆ ತೊಂದರೆಯಾಗುತ್ತದೆ ಎಂದು ಪ್ರಶ್ನಿಸಿದರು. ಯಾವುದೇ ವರ್ಗಾವಣೆ ಕ್ರಮ ಕೈಗೊಳ್ಳದಂತೆ ಅವರು ಸೂಚನೆ ನೀಡಿದರು.

today short news ಆರೋಗ್ಯ ಇಲಾಖೆ ಕಮಿಷನರ್​ರವರೊಂದಿಗೆ ಮಾತನಾಡುತ್ತಿರುವ ಶಾಸಕರು
today short news ಆರೋಗ್ಯ ಇಲಾಖೆ ಕಮಿಷನರ್​ರವರೊಂದಿಗೆ ಮಾತನಾಡುತ್ತಿರುವ ಶಾಸಕರು

today short news : ಸ್ಕೂಟರ್‌ನಲ್ಲಿ ತೆರಳಿ ಜನರ ಸಮಸ್ಯೆ ಆಲಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ: ಸರಳತೆಗೆ ಮೆಚ್ಚುಗೆ

ಶಿವಮೊಗ್ಗ: ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ನಿನ್ನೆ ಬೆಳಿಗ್ಗೆ (ಜೂನ್ 30, 2025) ನಗರದ ವಾರ್ಡ್ ಸಂಖ್ಯೆ 12ರ ಬಾಪೂಜಿನಗರ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಜನರೊಡನೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು. ಶಾಸಕರು ಸಾಮಾನ್ಯ ವ್ಯಕ್ತಿಯಂತೆ ಸ್ಕೂಟರ್‌ನಲ್ಲಿ ತೆರಳಿ ಜನರ ಅಹವಾಲುಗಳನ್ನು ಆಲಿಸಿದ್ದು, ಸಾರ್ವಜನಿಕರ ಗಮನ ಸೆಳೆದಿದ್ದು, ಅವರ ಸರಳತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

today short news ಸ್ಕೂಟರ್​ನಲ್ಲಿ ತೆರಳಿ ಸಮಸ್ಯೆ ಆಲಿಸುತ್ತಿರುವ ಶಾಸಕ ಎಸ್​ಎನ್​ ಚನ್ನಬಸಪ್ಪ
today short news ಸ್ಕೂಟರ್​ನಲ್ಲಿ ತೆರಳಿ ಸಮಸ್ಯೆ ಆಲಿಸುತ್ತಿರುವ ಶಾಸಕ ಎಸ್​ಎನ್​ ಚನ್ನಬಸಪ್ಪ
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor