SHIVAMOGGA NEWS TODAY

ಜೈಲ್​ ಸರ್ಕಲ್​ನಲ್ಲಿದ್ದ ಜಾಹೀರಾತು ಬ್ಯಾನರ್​​ ತೆರವು: ಮಾಧ್ಯಮದ ವರದಿಗೆ ತಕ್ಷಣವೇ ಸ್ಪಂದಿಸಿದ ಟ್ರಾಫಿಕ್ ಪೊಲೀಸರು!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Traffic Police ಶಿವಮೊಗ್ಗ: ನಗರದ ಜೈಲ್​ ಸರ್ಕಲ್​ನಲ್ಲಿ ಫುಟ್‌ಪಾತ್‌ ಒತ್ತುವರಿ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದ್ದ ಬೃಹತ್​ ಗಾತ್ರದ ಜಾಹೀರಾತು ಫಲಕವನ್ನು ಟ್ರಾಫಿಕ್ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ತೆರವುಗೊಳಿಸಿದ್ದಾರೆ.

ಶಿವಮೊಗ್ಗ: ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಬೃಹತ್ ಪ್ರತಿಭಟನೆ, ಸಾವಿರಾರು ವಿದ್ಯಾರ್ಥಿಗಳು ಭಾಗಿ

ಜೈಲ್​ ಸರ್ಕಲ್​ನ ಫುಟ್‌ಪಾತ್‌ ಒತ್ತುವರಿ ಮಾಡಿ ಬೃಹತ್​ ಗಾತ್ರದ ಜಾಹೀರಾತು ಬೋರ್ಡ್​​ ಒಂದನ್ನು ಅಳವಡಿಸಲಾಗಿತ್ತು. ಈ ಜಾಹೀರಾತು ಬೋರ್ಡ್​​ಗೆ ಬಳಸಲಾಗಿದ್ದ ಅಡಿಕೆ ದಬ್ಬೆಗಳು ಫುಟ್‌ಪಾತ್‌ನತ್ತ ಚಾಚಿಕೊಂಡಿದ್ದು, ಹಾದಿಹೋಕರು ಮತ್ತು ಪಾದಾಚಾರಿಗಳ ಓಡಾಟಕ್ಕೆ ತೀವ್ರ ಸಮಸ್ಯೆ ಉಂಟುಮಾಡುತ್ತಿದ್ದವು. ಅಪಾಯಕ್ಕೆ ಆಹ್ವಾನ ನೀಡುವಂತಿದ್ದ ಈ ಜಾಹೀರಾತು ಫಲಕದ ಕುರಿತು ನಮ್ಮ ಮಲೆನಾಡು ಟುಡೇ ಪತ್ರಿಕೆಯು “ಜೈಲ್ ಸರ್ಕಲ್ ಬಳಿ ಫುಟ್‌ಪಾತ್ ಒತ್ತುವರಿ: ಜಾಹೀರಾತು ಫಲಕಗಳೇ ಸಾರ್ವಜನಿಕರಿಗೆ ತಲೆನೋವು” ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಬಿತ್ತರಿಸಿತ್ತು.

ಪತ್ರಿಕಾ ವರದಿಯನ್ನು ಪರಿಗಣಿಸಿದ ಟ್ರಾಫಿಕ್​​ ಇನ್ಸ್ಪೆಕ್ಟರ್​​ ದೇವರಾಜ್​ ಅವರು ಕೂಡಲೇ . ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದರು. ನಂತರ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಬೋರ್ಡ್​ನ್ನು ಸಂಪೂರ್ಣವಾಗಿ ತೆರವುಗೊಳಿಸಿದರು. ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುವ ರೀತಿಯಲ್ಲಿ ಯಾವುದೇ ಫ್ಲೆಕ್ಸ್​​ ಅಥವಾ ಬ್ಯಾನರ್‌ಗಳನ್ನು ಅಳವಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇನ್ನುಮುಂದೆ ಯಾರೇ ಆಗಲಿ ಇಂತಹ ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸುವಂತೆ ಫ್ಲೆಕ್ಸ್​​ಗಳನ್ನು ಹಾಕಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಇನ್ಸ್‌ಪೆಕ್ಟರ್ ದೇವರಾಜ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಸಮಸ್ಯೆಗೆ ವರದಿ ಪ್ರಕಟವಾದ ತಕ್ಷಣವೇ ಸ್ಪಂದಿಸಿ, ಪಾದಾಚಾರಿಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟ ಟ್ರಾಫಿಕ್​ ಇನ್ಸಪೆಕ್ಟರ್​​ ಮತ್ತು ಅವರ ಸಿಬ್ಬಂದಿ ವರ್ಗವನ್ನು ಮಲೆನಾಡು ಟುಡೇ ಶ್ಲಾಘಿಸಿದೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.