Traffic Police ಶಿವಮೊಗ್ಗ: ನಗರದ ಜೈಲ್ ಸರ್ಕಲ್ನಲ್ಲಿ ಫುಟ್ಪಾತ್ ಒತ್ತುವರಿ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕವನ್ನು ಟ್ರಾಫಿಕ್ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ತೆರವುಗೊಳಿಸಿದ್ದಾರೆ.
ಶಿವಮೊಗ್ಗ: ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಬೃಹತ್ ಪ್ರತಿಭಟನೆ, ಸಾವಿರಾರು ವಿದ್ಯಾರ್ಥಿಗಳು ಭಾಗಿ
ಜೈಲ್ ಸರ್ಕಲ್ನ ಫುಟ್ಪಾತ್ ಒತ್ತುವರಿ ಮಾಡಿ ಬೃಹತ್ ಗಾತ್ರದ ಜಾಹೀರಾತು ಬೋರ್ಡ್ ಒಂದನ್ನು ಅಳವಡಿಸಲಾಗಿತ್ತು. ಈ ಜಾಹೀರಾತು ಬೋರ್ಡ್ಗೆ ಬಳಸಲಾಗಿದ್ದ ಅಡಿಕೆ ದಬ್ಬೆಗಳು ಫುಟ್ಪಾತ್ನತ್ತ ಚಾಚಿಕೊಂಡಿದ್ದು, ಹಾದಿಹೋಕರು ಮತ್ತು ಪಾದಾಚಾರಿಗಳ ಓಡಾಟಕ್ಕೆ ತೀವ್ರ ಸಮಸ್ಯೆ ಉಂಟುಮಾಡುತ್ತಿದ್ದವು. ಅಪಾಯಕ್ಕೆ ಆಹ್ವಾನ ನೀಡುವಂತಿದ್ದ ಈ ಜಾಹೀರಾತು ಫಲಕದ ಕುರಿತು ನಮ್ಮ ಮಲೆನಾಡು ಟುಡೇ ಪತ್ರಿಕೆಯು “ಜೈಲ್ ಸರ್ಕಲ್ ಬಳಿ ಫುಟ್ಪಾತ್ ಒತ್ತುವರಿ: ಜಾಹೀರಾತು ಫಲಕಗಳೇ ಸಾರ್ವಜನಿಕರಿಗೆ ತಲೆನೋವು” ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಬಿತ್ತರಿಸಿತ್ತು.
ಪತ್ರಿಕಾ ವರದಿಯನ್ನು ಪರಿಗಣಿಸಿದ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರು ಕೂಡಲೇ . ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿದರು. ನಂತರ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಬೋರ್ಡ್ನ್ನು ಸಂಪೂರ್ಣವಾಗಿ ತೆರವುಗೊಳಿಸಿದರು. ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುವ ರೀತಿಯಲ್ಲಿ ಯಾವುದೇ ಫ್ಲೆಕ್ಸ್ ಅಥವಾ ಬ್ಯಾನರ್ಗಳನ್ನು ಅಳವಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಇನ್ನುಮುಂದೆ ಯಾರೇ ಆಗಲಿ ಇಂತಹ ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸುವಂತೆ ಫ್ಲೆಕ್ಸ್ಗಳನ್ನು ಹಾಕಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಂದು ಇನ್ಸ್ಪೆಕ್ಟರ್ ದೇವರಾಜ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ವರದಿ ಪ್ರಕಟವಾದ ತಕ್ಷಣವೇ ಸ್ಪಂದಿಸಿ, ಪಾದಾಚಾರಿಗಳ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟ ಟ್ರಾಫಿಕ್ ಇನ್ಸಪೆಕ್ಟರ್ ಮತ್ತು ಅವರ ಸಿಬ್ಬಂದಿ ವರ್ಗವನ್ನು ಮಲೆನಾಡು ಟುಡೇ ಶ್ಲಾಘಿಸಿದೆ.
