ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ। ಸಮುದ್ರದಲ್ಲಿ ಮುಳುಗಿ ಇಬ್ಬರ ಸಾವು

Tragedy while traveling from Shimoga to Murudeshwar. Both died by drowning in the sea

ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಹೋಗಿದ್ದಾಗ ದುರಂತ। ಸಮುದ್ರದಲ್ಲಿ ಮುಳುಗಿ ಇಬ್ಬರ ಸಾವು
Shimoga to Murudeshwar

SHIVAMOGGA | MALENADUTODAY NEWS | May 6, 2024 

 

ಶಿವಮೊಗ್ಗ ಜಿಲ್ಲೆಯ ಓರ್ವ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಮುರುಡೇಶ್ವರದ ಬೀಚ್‌ನಲ್ಲಿ ಈಜಲು ತೆರಳಿದ್ದಾಗ ಸಮುದ್ರದ ಅಲೆಗಳಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ. ನಿನ್ನೆ ಈ ಘಟನೆ ಸಂಭವಿಸಿದೆ. ಸಾಗರ ತಾಲ್ಲೂಕಿನಲ್ಲಿರುವ ಮದರಸಾ ಒಂದರಲ್ಲಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಪೂರಕವಾಗಿ ನಿನ್ನೆ ಭಟ್ಕಳ ಹಾಗೂ ಮುರುಡೇಶ್ವರಕ್ಕೆ ಪ್ರವಾಸ ಹಮ್ಮಿಕೊಂಡಿದ್ದರು. 18 ಯುವಕರು ಪ್ರವಾಸಕ್ಕೆ ತೆರಳಿದ್ದರು ಎಂಬ ಮಾಹಿತಿಯಿದೆ. 

 

ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದ ಯುವಕರು ಹಾಗೂ ಅಲ್ಲಿನ ಸ್ಥಳೀಯ ಯುವಕನೊಬ್ಬ ಸೇರಿಕೊಂಡು ಈಜಲು ತೆರಳಿದ್ದಾರೆ. ಮಳೆ ಗಾಳಿಯ ನಡುವೆ ಸಮುದ್ರದ ಅಲೆಗಳ ರಭಸಕ್ಕೆ ನಾಲ್ವರು ಯುವಕರು ಸಮುದ್ರ ಪಾಲಾಗಿದ್ದಾರೆ. ಅವರ ಪೈಕಿ ಇಬ್ಬರನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಇನ್ನಿಬ್ಬರನ್ನ ದೋಣಿ ಮೂಲಕ ದಡಕ್ಕೆ ಎಳೆದು ತಂದಿದ್ದಾರೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

 

ಮೃತರನ್ನ ಭಟ್ಕಳದ ಆಜಾದ್ ನಗರ ನಿವಾಸಿ ಇಸ್ಮಾಯಿಲ್ ಮೊಹ್ಮದ ಬರ್ಮಾವರ್ (24) ಮತ್ತು ಮತ್ತೊಬ್ಬ ಅಪ್ರಾಪ್ತ ಬಾಲಕ ಎಂದು ತಿಳಿದುಬಂದಿದೆ.