ಬಸ್​ ಹಾಗೂ ಬೈಕ್​​ ನಡುವೆ ಡಿಕ್ಕಿ, ಸವಾರ ಸಾವು

Published: 09 ಮಾರ್ಚ್ 2026, 12:26 ಅಪರಾಹ್ನ • 1 min read

ಶಿವಮೊಗ್ಗ : ಕೆ ಎಸ್​ ಆರ್​ ಟಿ ಸಿ ಬಸ್​ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ  ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ತಾಲೂಕಿನ ಹೊಳಲೂರು ಬಳಿ ನಡೆದಿದೆ. ಕೀರ್ತಿ ನಾಯ್ಕ್​​ (46) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ.

ಶಿವಮೊಗ್ಗ: ನಿಂತಿದ್ದ ಕಾರ್​ನ ಗ್ಲಾಸ್​​ ಪುಡಿಮಾಡಿದ ಕಿಡಿಗೇಡಿಗಳು

ನಿನ್ನೆ ರಾತ್ರಿ ಸುಮಾರು 9:30ರ ಸಮಯದಲ್ಲಿ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tragic Accident Bike Rider Killed near Holalur

Tragic Accident Bike Rider Killed near Holalur
Tragic Accident Bike Rider Killed near Holalur

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

Prathapa thirthahalli

Senior Journalist | Malenadu Today
✓ Verified Journalist