ಶಿವಮೊಗ್ಗ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರು ಬಳಿ ನಡೆದಿದೆ. ಕೀರ್ತಿ ನಾಯ್ಕ್ (46) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ.
ಶಿವಮೊಗ್ಗ: ನಿಂತಿದ್ದ ಕಾರ್ನ ಗ್ಲಾಸ್ ಪುಡಿಮಾಡಿದ ಕಿಡಿಗೇಡಿಗಳು
ನಿನ್ನೆ ರಾತ್ರಿ ಸುಮಾರು 9:30ರ ಸಮಯದಲ್ಲಿ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tragic Accident Bike Rider Killed near Holalur

