ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ (Arasalu and Kumsi) ಎಕ್ಸ್ಪ್ರೆಸ್ ರೈಲುಗಳಿಗೆ ಕಲ್ಪಿಸಲಾಗಿದ್ದ ತಾತ್ಕಾಲಿಕ ನಿಲುಗಡೆ ಅವಧಿಯನ್ನು ಮತ್ತೊಮ್ಮೆ ಮುಂದುವರಿಸಲಾಗಿದೆ. ಈ ಸಂಬಂಧ ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮತ್ತೊಂದು ತಿಂಗಳವರೆಗೆ ತಾತ್ಕಾಲಿಕ ನಿಲುಗಡೆಯನ್ನು ವಿಸ್ತರಿಸಿ ಆದೇಶಿಸಿದೆ.
ವಿಷಯ ವಿವರ
- ರೈಲು ಸಂಖ್ಯೆ 16227/16228 ಮೈಸೂರು–ತಾಳಗುಪ್ಪ–ಮೈಸೂರು ಡೈಲಿ ಎಕ್ಸ್ಪ್ರೆಸ್ ರೈಲಿಗೆ ಅರಸಾಳು ನಿಲ್ದಾಣದಲ್ಲಿ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ವಿಸ್ತರಿಸಲಾಗಿದೆ.
- ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ಪ್ರೆಸ್ ರೈಲಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಕಲ್ಪಿಸಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನೂ ಮುಂದಿನ ಒಂದು ತಿಂಗಳ ಅವಧಿಗೆ ವಿಸ್ತರಣೆ ಮಾಡಲಾಗಿದೆ.
- ವಿಸ್ತರಿಸಲಾದ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯು 2026ರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಜಾರಿಯಲ್ಲಿರಲಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ಈ ರೈಲುಗಳು ಸಂಬಂಧಪಟ್ಟ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.
ಈ ಕುರಿತು ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 22ರಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಈ ಮಾಹಿತಿ ನೀಡಿದ್ದಾರೆ.
