ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

Malenadu Today

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. 

ಜೋಗ ರಸ್ತೆ ಬಜಾಜ್ ಷೋರೂಮ್ ಬಳಿ . ಹಿಂಬದಿಯಿಂದ ಬಂದು KA15 5474, ನಂಬರಿನ ಲಾರಿ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.

ಸಾದ್ವಿ ಪ್ರಗ್ಯಾ ವಿರುದ್ಧ ದೂರು/ ಕೋಟೆ ಪೊಲೀಸ್​ ಸ್ಟೇಷನ್​ಗೆ ಹಾಜರಾಗುವಂತೆ ಸೂಚನೆ/ ದಾಖಲಾಗಿತ್ತಾ ಇನ್ನೊಂದು ಕಂಪ್ಲೆಂಟ್

ಸ್ಥಳೀಯರ ಪ್ರಕಾರ, ಹಿಗ್ಗಾಮುಗ್ಗಾ ಡ್ರೈವ್ ಮಾಡಿಕೊಂಡು ಬಂದಿದ್ದ ಚಾಲಕ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ. 

ಅಗ್ನಿ ಆಕಸ್ಮಿಕ : ಅಂಗಡಿಗೆ ಬಿತ್ತು ಬೆಂಕಿ/ ಉಡುಗೊರೆ ತಯಾರಿಸುವ ಶಾಪ್​ನಲ್ಲಿ 50 ಲಕ್ಷ ರೂಪಾಯಿಗೂ ಅಧಿಕ ನಷ್ಟ?

ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿ ಎನ್ನಲಾಗುತ್ತಿದೆ. 

ಕೆಲಸದ ಸಮಾಚಾರ/ Job news/ ಕೆಲಸ ಹುಡುಕುತ್ತಿರೋರಿಗೆ ಇಲ್ಲಿದೆ ಗುಡ್​ ನ್ಯೂಸ್/ ಶಿವಮೊಗ್ಗದಲ್ಲಿಯೇ ನಡೆಯಲಿದೆ JOB ಮೇಳ/ ವಿವರ ಇಲ್ಲಿದೆ, ವಿಷಯ ಎಲ್ಲರಿಗೂ ತಿಳಿಸಿ

ಘಟನೆ ಸಂಬಂಧ ಸಾಗರ ಟೌನ್​ ಪೊಲೀಸರು ಸ್ತಳಕ್ಕೆ ಆಗಮಿಸಿದ್ದ ಪರಿಶೀಲನೆ ನಡೆಸಿದ್ಧಾರೆ. ಇನ್ನೂ ಈ ಭಾಗದಲ್ಲಿ ಲಾರಿಗಳ ಓಡಾಟದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು,

ಸ್ಪೀಡ್​ ಲಿಮಿಟ್​ ಇಲ್ಲದೇ ಲಾರಿಗಳು ಓಡಾಡುತ್ತಿವೆ. ಅದರಲ್ಲಿಯು ಕಾಲೇಜುಗಳ ಸಮೀಪ, ಶಾಲೆಗಳ ಸಮೀಪ ಇಂತಹ ವೇಗದ ಲಾರಿಗಳಿಗೆ ಪೊಲೀಸರು ಸಹ ಕಡಿವಾಣ ಹಾಕುತ್ತಿಲ್ಲ ಎಂದು ಆರೋಪಿಸಿದ್ಧಾರೆ. 

ಈ ಸುದ್ದಿಯ ಇನ್ನಷ್ಟು ಅಪ್​ಡೇಟ್ಸ್ ಇಲ್ಲಿದೆ ಓದಿ : ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರ/ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Share This Article