tunga dam : ತುಂಗಾ ಜಲಾಶಯದಿಂದ ನೀರು ಬಿಡುಗಡೆ | ಸಾರ್ವಜನಿಕರಿಗೆ ಎಚ್ಚರಿಕೆ
ಶಿವಮೊಗ್ಗ : ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಧಾರಕಾರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನೀರನ್ನು ಬಿಡುವ ಸಂಭವವಿರುತ್ತದೆ.
ಈ ಹಿನ್ನಲೆ ತುಂಗಾ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಬರುವ ತಗ್ಗು ಪ್ರದೇಶಗಳಲ್ಲಿ ಜನರು ಯಾವುದೇ ಚಟುವಟಿಕೆಗಳನ್ನು ಮಾಡಬಾರದು, ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವಾರದು, ಹಾಗೂ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರಿಗೆ ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆಯಿಂದಿರಲು ಕರ್ನಾಟಕ ನೀರಾವತಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
