KARNATAKA NEWS/ ONLINE / Malenadu today/ Nov 13, 2023 SHIVAMOGGA NEWS
Shivamogga | ಜಮೀರ್ @ ಬಚ್ಚಾನಿಗೆ ಶಿವಮೊಗ್ಗ ಕೋರ್ಟ್ 2 ವರ್ಷ ಶಿಕ್ಷೆ ವಿಧಿಸಿದೆ. ಈತನ ವಿರುದ್ಧ ದಾವಣಗೆರೆಯ ಮಾನ್ಯ 1ನೇ ಜೆಎಂಎಫ್.ಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಅನ್ನು ಹೊರಡಿಸಿತ್ತು. ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂಧಿಗಳಾದಪರಶುರಾಮಪ್ಪ ಹೆಚ್.ಸಿ ಮತ್ತು ಸತೀಶ್ ಹೆಚ್.ಸಿ ರವರುಗಳು ವಾರೆಂಟ್ ಜಾರಿಗಾಗಿ ಆರೋಪಿ ಜಮೀರ್ @ ಬಚ್ಚಾ @ ಬಚ್ಚನ್ ನ ಮನೆಯ ಬಳಿ ಬಂದಿದ್ದರು.
READ : ಬಾಳೆಬೈಲ್ ನಲ್ಲಿ ಬುಲೆಟ್ -ಕಾರು ಡಿಕ್ಕಿ! ಅರಣ್ಯ ಇಲಾಖೆ ಸಿಬ್ಬಂದಿ ಸಾವು! ಎಂತಹ ಘಟನೆ ಆಯ್ತು!?
ಆದರೆ ಬಚ್ಚಾ ಪೊಲೀಸ್ ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡಿ ಅವರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ತಳ್ಳಿ ಜೀವಬೆದರಿಕೆ ಹಾಕಿದ್ದ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 314/2016 ಕಲಂ 504, 506, 353, 308, 333 ಐಪಿಸಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಬಚ್ಚನಾ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರಯಲಾಗಿತ್ತು. ಜೊತೆಲೆಯಲ್ಲಿ ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 22 ಪ್ರಕರಣಗಳು ದಾಖಲಾಗಿರುತ್ತವೆ.
READ : ಮನೆಯಲ್ಲಿ ಮುಳ್ಳು ಹಂದಿ ಬೇಯುತ್ತಿದ್ದಾಗಲೇ ಬಂದ್ರು ಅರಣ್ಯ ಅಧಿಕಾರಿಗಳು! ಫುಲ್ ಶಾಕ್!
ಇನ್ನೂ ಈ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಗಳಾದ ಗಂಗಾಧರಪ್ಪ, ಪೊಲೀಸ್ ನಿರೀಕ್ಷಕರು, ಶಿವಮೊಗ್ಗ ಗ್ರಾಮಾಂತರ ವೃತ್ತ ರವರು ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಈ ಕೇಸ್ನ ಪರವಾಗಿ ಪರವಾಗಿ ಶಾಂತರಾಜ್, ಸರ್ಕಾರಿ ಅಭಿಯೋಜಕರವರು, ವಾದ ಮಂಡಿಸಿದ್ದರು
READ : ತೋಟದಲ್ಲಿ ತಂತಿ ಬೇಲಿಗೆ ಸಿಕ್ಕ ಆನೆಮರಿ! ಮುದ್ದು ಕಂದನನ್ನ ಹೇಗೆ ಕಾಪಾಡಿದ್ವು ಗೊತ್ತಾ ಕಾಡಾನೆಗಳು!?
ಸದ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ಮುಗಿದಿದ್ದು ತೀರ್ಪು ಹೊರಬಿದ್ದಿದೆ. ಜಮೀರ್ @ ಬಚ್ಚಾ @ ಬಚ್ಚನ್, 26 ವರ್ಷ, ಟಿಪ್ಪುನಗರ, ಶಿವಮೊಗ್ಗ ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಕೆ ಮಾನು ರವರು ದಿನಾಂಕಃ 10-11-2023 ರಂದು ಆರೋಪಿಗೆ 02 ವರ್ಷ ಸಾಧಾ ಕಾರಾಗೃಹ ಶಿಕ್ಷೆ ಮತ್ತು 20,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 2 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
