ಸಾಗರ ತಾಲ್ಲೂಕಿನಲ್ಲಿ ವಿದ್ಯಾರ್ಥಿನಿ ಮೇಲೆ ಲಾರಿ ಹರಿದ ಘಟನೆ/ ಚಾಲಕ ಕೃಷ್ಣಾಚಾರಿ ಸಾವು
ಸಾಗರ ತಾಲ್ಲೂಕಿನ ಜೋಗದ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಲಾರಿಯು ಹಾಸ್ಟೆಲ್ನಿಂದ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿತ್ತು. ಈ ಲಾರಿ ಚಾಲಕ ಇವತ್ತು ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು. ಆ ಘಟನೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಲಾರಿಯ ಚಾಲಕ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.
ಇದನ್ನು ಓದಿ : Exclusive / ಸಾಗರ ಟೌನ್ನಲ್ಲಿ ನಡೆದ ಭೀಕರ ಲಾರಿ ಅಪಘಾತ ಸಂಭವಿಸಿದ್ದೇಗೆ ನೋಡಿ ಸಿ.ಸಿ.ಟಿವಿ ವಿಡಿಯೋದಲ್ಲಿ!
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ
ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ ಹಿನ್ನೆಲೆಯಲ್ಲಿ, ಲಾರಿ ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಾಚಾರಿ ಇವತ್ತು ನಿಧನರಾಗಿದ್ದಾರೆ.