ಶಿವಮೊಗ್ಗ : ನಾಳೆಯಿಂದ ಜಿಲ್ಲೆಯ ಸಕ್ರೆಬೈಲಿನಲ್ಲಿರುವ ಆನೆ ಬಿಡಾರ ಒಂದು ತಿಂಗಳ ಕಾಲ ಕ್ಲೋಸ್ ಆಗಲಿದೆ. ಇದರ ನಡುವೆ ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ-ಸಿಂಹ ಧಾಮ ಸಫಾರಿಗೆ ಆಗಮಿಸುವ ಪ್ರವಾಸಿಗರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ: ಯಾವಾಗಿನವರೆಗೆ ಗೊತ್ತಾ?https://malenadutoday.com/sakrebyle-elephant-camp-closed-for-tourists/
ಅದೇನೆಂದರೆ, ಸಾಮಾನ್ಯವಾಗಿ ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಪ್ರತಿ ಮಂಗಳವಾರ ವಾರದ ರಜೆ ಇರುತ್ತದೆ. ಆದರೆ ಇದು ಹಾಲಿಡೇ ಮಂತ್ ಆಗಿರುವುದರಿಂದ ಹುಲಿ-ಸಿಂಹ ಧಾಮಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ, ವಿಶೇಷವಾಗಿ ದಿನಾಂಕ: 26.05.2026ರ ಮಂಗಳವಾರದಂದು ಹುಲಿ-ಸಿಂಹ ಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ತೆರೆದಿಡಲಾಗುತ್ತದೆ.
ಸಕ್ರೆಬೈಲು ಆನೆ ಬಿಡಾರ ಒಂದು ತಿಂಗಳ ಕಾಲ ಬಂದ್ ಆಗಿರುವುದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಪ್ರವಾಸಿಗರು ತ್ಯಾವರೆಕೊಪ್ಪಕ್ಕೆ ಬರಬಹುದಾಗಿದೆ.
Tyavarekoppa Safari to Remain Open on Tuesday
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
