SHIVAMOGGA NEWS TODAY

ಶಿವಮೊಗ್ಗ: ಕಲ್ಯಾಣ ಮಂಟಪದಲ್ಲಿ ಚಿನ್ನ ಕಳ್ಳತನ ಮಾಡಿದ್ದ ಖದೀಮರು ಕೇವಲ 6 ಗಂಟೆಯಲ್ಲಿ ಅರೆಸ್ಟ್!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Vinobanagar Police ಶಿವಮೊಗ್ಗ: ಮದುವೆ ಮನೆಯ ಸಂಭ್ರಮದ ನಡುವೆ ಅತಿಥಿಗಳ ಕೊಠಡಿಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಶಿವಮೊಗ್ಗದ ವಿನೋಬನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ದೂರು ದಾಖಲಾದ ಕೇವಲ 6 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ 

ಪ್ರಕರಣದ ಹಿನ್ನೆಲೆ

ಏಪ್ರಿಲ್ 30 ರಂದು ನಗರದ ನವುಲೆ ಬಳಿಯಿರುವ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಈ ವೇಳೆ ಸದಾಶಿವಪ್ಪ ಎಂಬುವವರು ರೂಮ್‌ನಲ್ಲಿ ಬ್ಯಾಗ್‌ನಲ್ಲಿ ಇಟ್ಟಿದ್ದ ಸುಮಾರು 28 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಕಳ್ಳರು ದೋಚಿದ್ದರು. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಈ ಹಿನ್ನೆಲೆ ಪೊಲೀಸರು ಪ್ರಕರಣವನ್ನು ಭೇಧಿಸಿಸಲು ವಿನೋಬನಗರ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು, ನಂತರ ತಾಂತ್ರಿಕ ಮಾಹಿತಿ ಮತ್ತು ನೆಟ್‌ವರ್ಕ್ ಬಳಸಿಕಾರ್ಯಾಚರಣೆ ನಡೆಸಿದರು. ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಅಮ್ಜದ್ ಖಾನ್ @ ಅಂಜು (29 ವರ್ಷ) ಮತ್ತು ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. 

ಬಂಧಿತರಿಂದ ಕಳವು ಮಾಡಲಾಗಿದ್ದ 24 ಗ್ರಾಂ ಬಂಗಾರದ ಆಭರಣಗಳು (ಅಂದಾಜು ಮೌಲ್ಯ 3.75 ಲಕ್ಷ ರೂ.) ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಮಾಲಿನ ಮೌಲ್ಯ ಸುಮಾರು 5.85 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿದೆ.

Vinobanagar Police Crack Wedding Hall Theft Case

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.